LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ: ಶಶಿ ತರೂರ್

ಬೆಂಗಳೂರು: ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ. ಅಸಮಾನತೆ, ತಾರತಮ್ಯಗಳು ಅಲ್ಲೂ ಇದ್ದು, ಅದನ್ನು ಅರ್ಥ ಮಾಡಿಕೊಂಡರಷ್ಟೇ ಪರ್ಯಾಯ ಜಾಗತಿಕ ವ್ಯವಸ್ಥೆಯ ಬಗ್ಗೆ ಚಿಂತಿಸಬಹುದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಪ್ರತಿಪಾದಿಸಿದರು.
'ಜಾಗತಿಕ ಹೂಡಿಕೆದಾರರ ಸಮಾವೇಶ’ (ಜಿಮ್-25)'ದಲ್ಲಿ 'ಪ್ರಕ್ಷುಬ್ಧತೆಯಲ್ಲಿ ಪ್ರವರ್ಧಮಾನ: ರಾಷ್ಟ್ರಗಳು ಹೇಗೆ ಸವಾಲು ಎದುರಿಸಬಹುದು' ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ವಿಶ್ವಸಂಸ್ಥೆ ಕೂಡಾ ನಾವು ಬದುಕುತ್ತಿರುವ ಜಗತ್ತಿನ ಕನ್ನಡಿಯಾಗಿದೆ ಎಂದು ಹೇಳಿದರು.

ಕೋವಿಡ್ ಸಂಕಷ್ಟ ಪರಿಸ್ಥಿತಿ ಜಾಗತಿಕ ಪೂರೈಕೆ ಸರಣಿಯ ಸ್ವರೂಪ ಬದಲಾಗಿದ್ದನ್ನು ಜಗತ್ತಿಗೆ ತೋರಿಸಿಕೊಟ್ಟಿತು. ಕೋವಿಡ್ ನಂತರದ ಜಾಗತಿಕ ನಾಯಕರು ಗಡಿಯಾಚಿನ ವಿಶ್ವದಲ್ಲಿ ಪ್ರಬಲರಾಗುವ ಬದಲಿಗೆ ತಮ್ಮ ಗಡಿರೇಖೆಯೊಳಗೆ ಅಂದರೆ ಆಂತರಿಕವಾಗಿ ಬಲಿಷ್ಠರಾಗಲು ಯತ್ನಿಸುತ್ತಿದ್ದಾರೆ ಎಂದು ತರೂರ್ ವಿವರಿಸಿದರು.
ಪ್ರಜಾತಂತ್ರ ವ್ಯವಸ್ಥೆ ಉತ್ತಮಗೊಳ್ಳುವ ನಿಟ್ಟಿನಲ್ಲಿ ಮತದಾರರು ಸುಶಿಕ್ಷಿತರಾಗುವುದು ಅತಿ ಮುಖ್ಯ. ಜನರಿಗೆ ಉತ್ತಮ ಶಿಕ್ಷಣ ನೀಡಿ, ಸಬಲೀಕರಣಗೊಳಿಸಿದಲ್ಲಿ, ದಕ್ಷ ಸರ್ಕಾರ ರಚನೆ ಖಾತರಿಯಾಗಲಿದೆ. ನಮ್ಮ ಸಮಾಜದ ತಳವರ್ಗದ ಜನರಲ್ಲಿ ಖರೀದಿ ಸಾಮರ್ಥ್ಯ ಅತಿ ಕಡಿಮೆ ಇದೆ. ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 80 ಕೋಟಿ ಜನರಿಗೆ ಉಚಿತ ಆಹಾರಧಾನ್ಯ ಒದಗಿಸುತ್ತಿದೆ. ಅಂದರೆ, ಇದರರ್ಥ ಇಷ್ಟು ಭಾರಿ ಸಂಖ್ಯೆಯ ಜನರಲ್ಲಿ ಖರೀದಿ ಸಾಮರ್ಥ್ಯ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟರು.

ಜಗತ್ತಿನಲ್ಲೇ ಭಾರತ ಅತಿಹೆಚ್ಚು ನಿರುದ್ಯೋಗಿಗಳನ್ನು ಹೊಂದಿದ್ದು, ಯುವಜನರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ. ಏನನ್ನು ಚಿಂತಿಸಬೇಕು ಎಂಬುದರ ಬದಲಿಗೆ ಹೇಗೆ ಚಿಂತಿಸಬೇಕು ಎಂಬುದನ್ನು ವಿದ್ಯಾರ್ಥಿಗಳಲ್ಲಿ ಕಲಿಸಬೇಕಿದೆ. ಯುವಜನರನ್ನು ಕೌಶಲ್ಯಪೂರ್ಣರನ್ನಾಗಿಸಿ, ಉದ್ಯೋಗ ದೊರಕಿಸಬೇಕಿದೆ ಎಂದರು.
ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರಜ್ಞಾನದ ಬಳಕೆಯಿಂದ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಭಾರಿ ಬದಲಾವಣೆಯಾಗಲಿದ್ದು, ವಿದ್ಯಾರ್ಥಿಗಳು ಮತ್ತು ಯುವಜನರನ್ನು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಸಜ್ಜುಗೊಳಿಸುವ ಅಗತ್ಯವಿದೆ. ಪ್ರಸ್ತುತ ಜಾಗತಿಕ ಉದ್ಯೋಗ ವಲಯದಲ್ಲಿರುವ ಶೇಕಡ 30ರಷ್ಟು ಉದ್ಯೋಗಗಳು ಇನ್ನು ಐದು ವರ್ಷಗಳಲ್ಲಿ ಕಣ್ಮರೆಯಾಗಲಿವೆ ಎಂದು ಹೇಳಿದರು.

ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಎ. ಪಪಾಂಡ್ರೂ, ಉತ್ತಮ, ಆದರ್ಶ ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ ನಾಗರಿಕರ ಮೇಲೆ ವಿಶ್ವಾಸ ಇಡಬೇಕು; ಶಿಕ್ಷಣ ಮತ್ತು ಪ್ರಜಾತಂತ್ರ ಜತೆಜತೆಯಾಗಿ ಮುನ್ನಡೆಯಬೇಕು ಎಂದರು. ಉತ್ತಮ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಉತ್ತರದಾಯತ್ವ ಮತ್ತು ಪಾರದರ್ಶಕತೆ ಅತಿ ಮುಖ್ಯ. ಇವುಗಳ ಕೊರತೆಯಿಂದಾಗಿಯೇ ಗ್ರೀಸ್ ಆರ್ಥಿಕ ಸಂಕಷ್ಟ ಎದುರಿಸಬೇಕಾಯಿತು. ಗ್ರೀಸ್ ನಲ್ಲಿ ಜನರ ಹಣ ಸಾರ್ವಜನಿಕರ ಹಿತಾಸಕ್ತಿಗೆ ವಿನಿಯೋಗವಾಗಲಿಲ್ಲ. ರಾಜಕಾರಣಿಗಳ ಗಮನ ಕೇವಲ ಅಧಿಕಾರ ಹಿಡಿಯುವುದರತ್ತಲೇ ಇತ್ತು. ಹೀಗಾದಾಗ ಸಂಕಷ್ಟ ತಲೆದೋರುವುದು ಸಹಜ ಎಂದರು.
'ಇಂಕ್ ಟಾಕ್ಸ್' ಸಂಸ್ಥೆ ಸಿಇಒ ಲಕ್ಷ್ಮಿ ಪ್ರಟೂರಿ ಗೋಷ್ಠಿ ನಿರ್ವಹಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ