LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ರಿಷಭ್ ಪಂತ್‌ಗೆ ವಿಶೇಷ ಮನವಿ : ರವಿಚಂದ್ರನ್ ಅಶ್ವಿನ್!

ರಿಷಭ್ ಪಂತ್‌ಗೆ ವಿಶೇಷ ಮನವಿ : ರವಿಚಂದ್ರನ್ ಅಶ್ವಿನ್!

ಭಾರತ ತಂಡದ ಬ್ಯಾಟಿಂಗ್‌ ಅವಧಿ ವಿಸ್ತರಣೆಗೆ ಹೆಚ್ಚಿನ ಗಮನ ಹರಿಸಬೇಕು ಮತ್ತು ರಿಷಭ್ ಪಂತ್ ತಮ್ಮ ಶತಕಗಳನ್ನು ದ್ವಿಶತಕಗಳನ್ನಾಗಿ ಪರಿವರ್ತಿಸಬೇಕೆಂದು ಆರ್. ಅಶ್ವಿನ್ ಸಲಹೆ ನೀಡಿದ್ದಾರೆ. ಕೆಳ ಕ್ರಮಾಂಕ ಬಲಿಷ್ಠವಾಗಿಲ್ಲದಿದ್ದಾಗ ಪಂತ್ ಹೆಚ್ಚಿನ ಕೊಡುಗೆ ನೀಡಬೇಕು ಎಂದು ಅವರು ಹೇಳಿದ್ದಾರೆ.
ನವದೆಹಲಿ: ಭಾರತ ತಂಡ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ತನ್ನ ಬ್ಯಾಟಿಂಗ್‌ ಅವಧಿಯನ್ನು ವಿಸ್ತರಿಸುವತ್ತ ಹೆಚ್ಚು ಗಮನ ಹರಿಸಬೇಕು ಹಾಗೂ ರಿಷಭ್‌ ಪಂತ್‌ ತಮ್ಮ ಶತಕಗಳನ್ನು ದ್ವಿಶತಕಗಳಾಗಿ ಪರಿವರ್ತಿಸಬೇಕು ಎಂದು ಮಾಜಿ ಕ್ರಿಕೆಟಿಗ ಆರ್‌.ಅಶ್ವಿನ್‌ ಸಲಹೆ ನೀಡಿದ್ದಾರೆ.

ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಮಾತನಾಡಿರುವ ಅಶ್ವಿನ್‌, ‘ನಿಮಗೊಂದು ಸಲಹೆ ನೀಡಲಾ?, ಮುಂದಿನ ಬಾರಿ 130 ರನ್‌ ಗಳಿಸಿದಾಗ ದಯವಿಟ್ಟು ದ್ವಿಶತಕ ಬಾರಿಸುವತ್ತ ಗಮನ ನೀಡಿ. ತಂಡದ ಕೆಳ ಕ್ರಮಾಂಕ ಬಲಿಷ್ಠವಾಗಿಲ್ಲದಿದ್ದಾಗ ನೀವೇ ಹೆಚ್ಚು ಕೊಡುಗೆ ನೀಡಬೇಕು’ ಎಂದು ಪಂತ್‌ಗೆ ಕೇಳಿಕೊಂಡಿದ್ದಾರೆ.

‘ಭಾರತ ತಂಡ ಪ್ರತಿ ಇನ್ನಿಂಗ್ಸ್‌ನಲ್ಲಿ ಹೆಚ್ಚು ರನ್‌ ಗಳಿಸುವುದರ ಕಡೆಗಷ್ಟೇ ಅಲ್ಲ, ಹೆಚ್ಚು ಸಮಯ ಕ್ರೀಸ್‌ನಲ್ಲಿರಲು ಸಹ ಗಮನ ನೀಡಬೇಕಿದೆ. ಇಂಗ್ಲೆಂಡ್‌ ಆಟಗಾರರು ಹೆಚ್ಚು ಸಮಯ ಫೀಲ್ಡಿಂಗ್‌ನಲ್ಲಿ ಕಳೆಯುವಂತೆ ಮಾಡಬೇಕು. ಮೊದಲ ಟೆಸ್ಟ್‌ನಲ್ಲಿ ಯಾವಾಗ ನಮ್ಮ ಬ್ಯಾಟಿಂಗ್‌ 5ನೇ ದಿನಕ್ಕೆ ವಿಸ್ತರಣೆಗೊಳ್ಳಲಿಲ್ಲವೋ ಆಗಲೇ ಪಂದ್ಯ ಕೈಜಾರಿತ್ತು. ಇಂಗ್ಲೆಂಡ್‌ ಅನುಸರಿಸುತ್ತಿರುವ ತಂತ್ರಗಳನ್ನು ಅರಿಯದಿದ್ದರೆ ಸೋಲಿನಿಂದ ಪಾರಾಗುವುದು ಕಷ್ಟ’ ಎಂದು ಅಶ್ವಿನ್‌ ಹೇಳಿದ್ದಾರೆ. ‘ಇಂಗ್ಲೆಂಡ್‌ಗೆ ಕನಿಷ್ಠ 450 ರನ್‌ ಗುರಿ ನಿಗದಿಪಡಿಸಬೇಕು ಜೊತೆಗೆ ಅದನ್ನು ಬೆನ್ನತ್ತಲು ಹೆಚ್ಚು ಸಮಯ ನೀಡಬಾರದು. ಇಂಗ್ಲೆಂಡ್‌ ಅತಿಯಾದ ಆಕ್ರಮಣಕಾರಿ ಆಟಕ್ಕೆ ಮುಂದಾಗಿ ಸೋಲಿನತ್ತ ಮುಖ ಮಾಡುವ ಸಾಧ್ಯತೆ ಇರಲಿದೆ’ ಎಂದು ಅಶ್ವಿನ್‌ ಸಲಹೆ ನೀಡಿದ್ದಾರೆ.

T20 ಕ್ರಿಕೆಟ್ ಪವರ್‌ಪ್ಲೇ ಓವರ್‌ ರೂಲ್ಸ್‌ ಮಹತ್ವದ ಬದಲಾವಣೆ! ಹೊಸ ಲೆಕ್ಕಾಚಾರ
T20 ಕ್ರಿಕೆಟ್ ಪವರ್‌ಪ್ಲೇ ಓವರ್‌ ರೂಲ್ಸ್‌ ಮಹತ್ವದ ಬದಲಾವಣೆ! ಹೊಸ ಲೆಕ್ಕಾಚಾರ
ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್‌ನಲ್ಲಿ ಈ ಇಬ್ಬರ ಕಿತ್ತಾಟವೇ ಟೀಂ ಇಂಡಿಯಾ ಸೋಲಿಗೆ ಕಾರಣವಾಯ್ತಾ?
ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್‌ನಲ್ಲಿ ಈ ಇಬ್ಬರ ಕಿತ್ತಾಟವೇ ಟೀಂ ಇಂಡಿಯಾ ಸೋಲಿಗೆ ಕಾರಣವಾಯ್ತಾ?
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು 5 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಭಾರತ ನೀಡಿದ್ದ 371 ರನ್‌ಗಳ ಸವಾಲಿನ ಗುರಿ ಯಶಸ್ವಿಯಾಗಿ ಬೆನ್ನತ್ತುವಲ್ಲಿ ಬೆನ್ ಸ್ಟೋಕ್ಸ್ ಪಡೆ ಸಫಲವಾಗಿತ್ತು. ಇಂಗ್ಲೆಂಡ್ ಆರಂಭಿಕ ಬ್ಯಾಟರ್ ಬೆನ್ ಡಕೆಟ್ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ(149) ರನ್ ಸಿಡಿಸುವ ಮೂಲಕ ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ಜತೆಗೆ ಇಂಗ್ಲೆಂಡ್ ತಂಡವು ಸರಣಿಯಲ್ಲಿ 1-0 ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಭಾರತ ಅಭ್ಯಾಸ ಶಿಬಿರಕ್ಕೆ ಬುಮ್ರಾ, ಪ್ರಸಿದ್ಧ್‌ ಗೈರು

ಬರ್ಮಿಂಗ್‌ಹ್ಯಾಮ್‌: ಇಂಗ್ಲೆಂಡ್‌ ವಿರುದ್ಧ 2ನೇ ಟೆಸ್ಟ್‌ ಪಂದ್ಯಕ್ಕೆ ಭಾರತೀಯ ಆಟಗಾರರು ಶುಕ್ರವಾರ ಅಭ್ಯಾಸ ಆರಂಭಿಸಿದ್ದಾರೆ. ಆದರೆ ತಾರಾ ವೇಗಿ ಜಸ್‌ಪ್ರೀತ್‌ ಬುಮ್ರಾ ಹಾಗೂ ಪ್ರಸಿದ್ಧ್‌ ಕೃಷ್ಣ ಗೈರಾದರು. ಮೊಹಮ್ಮದ್‌ ಸಿರಾಜ್‌ ಮೈದಾನದಲ್ಲಿ ಕಾಣಿಸಿಕೊಂಡರೂ, ಬೌಲಿಂಗ್ ಬದಲು ಬ್ಯಾಟಿಂಗ್‌ ಅಭ್ಯಾಸ ನಡೆಸಿದರು. ಆಕಾಶ್‌ದೀಪ್‌, ಅರ್ಶ್‌ದೀಪ್‌ ಸಿಂಗ್‌ ಕೂಡಾ ದೀರ್ಘ ಕಾಲ ಅಭ್ಯಾಸ ನಿರತರಾದರು. ಉಳಿದಂತೆ ಬಹುತೇಕ ಎಲ್ಲಾ ಬ್ಯಾಟರ್‌ಗಳು ನೆಟ್ಸ್‌ನಲ್ಲಿ ಕೆಲ ಕಾಲ ಬೆವರಿಳಿಸಿದರು. 2ನೇ ಪಂದ್ಯ ಬುಧವಾರ ಆರಂಭಗೊಳ್ಳಲಿದೆ.

ಭಾರತ-ಆಸ್ಟ್ರೇಲಿಯಾ ಏಕದಿನ, ಟಿ20 ಪಂದ್ಯಗಳ ಟಿಕೆಟ್‌ಗೆ ಭಾರೀ ಬೇಡಿಕೆ

ಮೆಲ್ಬರ್ನ್‌: ಭಾರತದ ಆಸ್ಟ್ರೇಲಿಯಾ ಪ್ರವಾಸಕ್ಕೆ ಇನ್ನೂ 4 ತಿಂಗಳು ಬಾಕಿ ಇದ್ದು, ಈಗಾಗಲೇ ಏಕದಿನ ಹಾಗೂ ಟಿ20 ಪಂದ್ಯಗಳ ಟಿಕೆಟ್‌ಗಳಿಗೆ ಭಾರೀ ಬೇಡಿಕೆ ಕಂಡು ಬರುತ್ತಿದೆ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ(ಸಿಎ) ತಿಳಿಸಿದೆ. ಈಗಾಗಲೇ 90000ಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿದ್ದು, ಸಿಡ್ನಿಯಲ್ಲಿ ನಡೆಯಲಿರುವ 3ನೇ ಏಕದಿನ ಹಾಗೂ ಕ್ಯಾನ್‌ಬೆರ್ರಾದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯಗಳ ಟಿಕೆಟ್‌ಗಳು ಸೋಲ್ಡ್‌ಔಟ್‌ ಆಗಿವೆ ಎಂದು ಸಿಎ ಹೇಳಿದೆ. ಭಾರತ ತಂಡ ಅಕ್ಟೋಬರ್‌-ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 3 ಏಕದಿನ, 5 ಟಿ20 ಪಂದ್ಯಗಳ ಸರಣಿಗಳನ್ನು ಆಡಲಿದೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ