LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ

ನವದೆಹಲಿ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಕಾಂಗ್ರೆಸ್ ನಾಯಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಲಭಿಸಿದ್ದು, ಶಾಸಕ ಸ್ಥಾನಕ್ಕೆ ಮರುಜೀವ ಸಿಕ್ಕಂತಾಗಿದೆ.

ಆದಾಯವನ್ನು ಬಹಿರಂಗಪಡಿಸುವುದು ಮಾತ್ರ ಸಾಕೇ? ಅಥವಾ ವ್ಯವಹಾರ ಸಂಬಂಧಿತ ಮಾಹಿತಿಯನ್ನೂ ಕಡ್ಡಾಯವಾಗಿ ಬಹಿರಂಗಪಡಿಸಬೇಕೇ? ಎಂಬ ಪ್ರಶ್ನೆಗೆ ಸಂಬಂಧಿಸಿದಂತೆ ಸಮಗ್ರ ವಿಚಾರಣೆ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಜೊತೆಗೆ, ಎದುರಾಳಿ ಅಭ್ಯರ್ಥಿ ಸಿ. ಮುನಿರಾಜು ಅವರು ಆರು ವಾರಗಳೊಳಗೆ ತಮ್ಮ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ ತಿಂಗಳಿಗೆ ಮುಂದೂಡಲಾಗಿದೆ.

ಈ ಹಿಂದೆ, ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರದಲ್ಲಿ ಆಸ್ತಿ ಮಾಹಿತಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿಲ್ಲ ಹಾಗೂ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪರ-ವಿರೋಧ ವಾದಗಳನ್ನು ಆಲಿಸಿದ ಹೈಕೋರ್ಟ್, ಸುಬ್ಬಾರೆಡ್ಡಿ ಅರ್ಜಿಯನ್ನು ವಜಾಗೊಳಿಸಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿತ್ತು. ಆದರೆ, ಮುನಿರಾಜು ಅವರನ್ನು ವಿಜಯಿಯಾಗಿ ಘೋಷಿಸಿರಲಿಲ್ಲ.

ಹೈಕೋರ್ಟ್ ಆದೇಶಕ್ಕೆ ಆರು ತಿಂಗಳೊಳಗೆ ತಡೆಯಾಜ್ಞೆ ಸಿಗದಿದ್ದರೆ, ಬಾಗೇಪಲ್ಲಿ ಕ್ಷೇತ್ರದಲ್ಲಿ ಮರುಚುನಾವಣೆ ಅನಿವಾರ್ಯವಾಗುವ ಸಾಧ್ಯತೆ ಇತ್ತು. ಈ ಹಿನ್ನೆಲೆ ಸುಬ್ಬಾರೆಡ್ಡಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಇದೀಗ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ, ಸುಬ್ಬಾರೆಡ್ಡಿಗೆ ಕಾನೂನು ಹೋರಾಟದಲ್ಲಿ ಪ್ರಥಮ ಜಯ ಸಿಕ್ಕಂತಾಗಿದೆ. ಮುಂದಿನ ವಿಚಾರಣೆಯಲ್ಲಿ ಅಂತಿಮ ತೀರ್ಪು ಏನಾಗಲಿದೆ ಎಂಬುದು ಕಾದು ನೋಡಬೇಕಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ