LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು

ಬಳ್ಳಾರಿ :ಪಠ್ಯಪುಸ್ತಕಗಳು ವೈವಿಧ್ಯಮಯ ಜೀವನದ ಅನುಭವಗಳ ಜೊತೆಗೆ ವಿವಿಧ ಜ್ಞಾನಶಿಸ್ತುಗಳ ಕೈಪಿಡಿಗಳಾಗಿದ್ದು, ಶೈಕ್ಷಣಿಕ ವ್ಯವಸ್ಥೆಯ ಉದ್ದೇಶಗಳನ್ನು ಸಾಧಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅಭಿಪ್ರಾಯಪಟ್ಟರು.
ನಗರದ ಬಳ್ಳಾರಿ ಬಿಜಿನೆಸ್ ಕಾಲೇಜು ಸಭಾಂಗಣದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ನಾತಕ ಪದವಿಯ ನಾಲ್ಕನೇ ಸೆಮಿಸ್ಟರ್‌ನ ಕಲಾ ಸೌರಭs-3, ವಾಣಿಜ್ಯ ಸೌರಭs-3, ವಿಜ್ಞಾನ ಸೌರಭ-3 ಕನ್ನಡ ಭಾಷಾ ಪಠ್ಯಪುಸ್ತಕಗಳ ಲೋಕಾರ್ಪಣೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪಠ್ಯಪುಸ್ತಕಗಳನ್ನು ಉತ್ತಮವಾಗಿ ರಚಿಸಿ ವಿದ್ಯಾರ್ಥಿಗಳಲ್ಲಿ ಔದ್ಯೋಗಿಕ ಭರವಸೆಯನ್ನು ಬೆಳೆಸುವ, ಆತ್ಮವಿಶ್ವಾಸವನ್ನು ತುಂಬುವ ಮಹತ್ವದ ಕಾರ್ಯವನ್ನು ಪ್ರಸಾರಾಂಗ ಮಾಡುತ್ತಿದೆ ಎಂದು ಹೇಳಿದರು.
ಪಠ್ಯಪುಸ್ತಕಗಳು ಹೊಸ ಹೊಸ ಜ್ಞಾನ ವಿಚಾರಗಳನ್ನು ತಿಳಿಸುವ ಮಹತ್ವದ ಸಾಧನಗಳಾಗಿದ್ದು, ಈ ಮೂಲಕ ವಿದ್ಯಾರ್ಥಿಗಳ ದೈನಂದಿನ ಜೀವನದ ಭಾಗಗಳಾಗಿ ಕಾರ್ಯನಿರ್ವಹಿಸಲು ವಿಶ್ವವಿದ್ಯಾಲಯವು ಮಹತ್ವದ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರೊ.ಸಿ.ಬಿ. ಚಿಲ್ಕರಾಗಿ ಅವರು ಮಾತನಾಡಿ, ವಿಶ್ವವಿದ್ಯಾಲಯವು ಪ್ರಕಟಿಸಿದ ಪಠ್ಯಪುಸ್ತಕಗಳು ಪ್ರಾಚೀನ ಮತ್ತು ಆಧುನಿಕ ಕವಿಗಳ ಸಂಗಮವಾಗಿದ್ದು, ವೈವಿಧ್ಯಮಯ ಜ್ಞಾನವನ್ನು ನೀಡುವ ಕಣಜಗಳಾಗಿವೆ, ಹೊಸ ಹೊಸ ಆಲೋಚನೆಗಳನ್ನು ಬೆಳೆಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಮಚಂದ್ರ ಅವರು ಮಾತನಾಡಿ ಈ ವರ್ಷ ಪಠ್ಯಪುಸ್ತಕಗಳು ವಿದ್ಯಾರ್ಥಿಗಳಿಗೆ ಬಹುಬೇಗ ದೊರೆತಿದ್ದು, ವಿದ್ಯಾರ್ಥಿಗಳು ಅಧ್ಯಯನ ಮಾಡುವುದರ ಮೂಲಕ ಉತ್ತಮ ಅಂಕಗಳನ್ನು ಗಳಿಸಬೇಕು ಎಂದು ಕರೆ ನೀಡಿದರು.
ಪ್ರಸಾರಾಂಗದ ನಿರ್ದೇಶಕ ಡಾ.ತಿಪ್ಪೇರುದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಸಾರಾಂಗವು ವಿಶ್ವವಿದ್ಯಾಲಯದ ಹೃದಯವಾಗಿದ್ದು, ವಿದ್ಯಾರ್ಥಿಗಳ, ಜನಸಾಮಾನ್ಯರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸಿ ಜ್ಞಾನ ಪ್ರಸರಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಲಾಸೌರಭ-3, ವಾಣಿಜ್ಯ ಸೌರಭ-3, ವಿಜ್ಞಾನ ಸೌರಭ-3 ಪಠ್ಯಪುಸ್ತಕಗಳನ್ನು ಸಂಪಾದಿಸಿದ ಡಾ.ಎ.ಎಂ.ರಾಜಶೇಖರಯ್ಯ, ಪ್ರೊ.ನಾಗಣ್ಣ ಕಿಲಾರಿ, ಡಾ.ಮಲ್ಲಿಕಾರ್ಜುನ ಎಂ. ಇವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಕನ್ನಡ ಅಧ್ಯಾಪಕರಾದ ಸರ್ವಮಂಗಳ, ಮಂಜುಳ ಕಾರ್ಯಕ್ರಮವನ್ನು ನಿರೂಪಿಸಿದರು. ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜಿನ ಅಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ