LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

ಮುಂಬೈ : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. 'ಬಾಲಿವುಡ್ ಹೀ ಮ್ಯಾನ್' ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು.
ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಇಂದು ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಅವರ ಸಾವಿನ ವದಂತಿಗಳು ಹರಡಿದ್ದು, ನಂತರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿತ್ತು.ವಿಲೇ ಪಾರ್ಲೆ ಸ್ಮಶಾನಕ್ಕೆ ಧರ್ಮೇಂದ್ರ ಕುಟುಂಬ ಹಾಗೂ ಬಾಲಿವುಡ್ ನಟ ಅಮೀರ್ ಖಾನ್ ಸೇರಿದಂತೆ ಮತ್ತಿತರರು ಆಗಮಿಸುತ್ತಿದ್ದಾರೆ.

ಅವರು ಶೋಲೆ, ಚುಪ್ಕೆ ಚುಪ್ಕೆ, ಯಮ್ಲಾ ಪಗ್ಲಾ ದೀವಾನಾ, ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಮುಂತಾದ ಅನೇಕ ಸೂಪರ್ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಆಕ್ಷನ್ ಚಲನಚಿತ್ರಗಳಲ್ಲಿನ ಅವರ ಪ್ರಮುಖ ಪಾತ್ರಗಳಿಂದಾಗಿ ಅವರಿಗೆ “ಆಕ್ಷನ್ ಕಿಂಗ್” ಮತ್ತು “ಹೀ-ಮ್ಯಾನ್” ಎಂಬ ಹೆಸರುಗಳು ದಕ್ಕಿವೆ.

ರಾಜಕೀಯ ಜೀವನ : 2004 ರಿಂದ 2009 ರವರೆಗೆ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ರಾಜಸ್ಥಾನದ ಬಿಕಾನೇರ್ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭೆಯ ಸದಸ್ಯರಾಗಿದ್ದರು.
ಗೌರವಗಳು : 2012 ರಲ್ಲಿ, ಭಾರತ ಸರ್ಕಾರದಿಂದ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣವನ್ನು ಪಡೆದಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ