LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಯೋಗ ಕೇವಲ ಆಸನವಲ್ಲ, ಮಾನಸಿಕ ಸ್ಥಿಮಿತ ಕೂಡ ಯೋಗ : ನಿರಂಜನಾನಂದ ಸರಸ್ವತಿ ಸ್ವಾಮೀಜಿ

ಬೆಂಗಳೂರು: ಯೋಗ ಎಂದರೆ ಕೇವಲ ಆಸನವಲ್ಲ. ದಿನದ 24 ಗಂಟೆ, ವರ್ಷದ 365 ದಿನಗಳ ಕಾಲ ಮನಸನ್ನು ಸಂಯಮದಲ್ಲಿಟ್ಟುಕೊಳ್ಳುವುದು ಕೂಡ ಯೋಗ ಎಂದು ಬಿಹಾರ ಸ್ಕೂಲ್ ಆಫ್ ಯೋಗ ವಿಶ್ವ ಪೀಠದ ನಿರಂಜನಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

ವೇದಾಂತ ಭಾರತಿ ಮತ್ತು ರಾಮಕೃಷ್ಣ ಮಠದಿಂದ ಬೆಂಗಳೂರಿನ ಬಸವನಗುಡಿಯ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಶತಮಾನೋತ್ಸವ ಸಭಾಂಗಣದಲ್ಲಿ “ಭಾರತೀಯ ಸಂಸ್ಕೃತಿ ಬಗ್ಗೆ ಆದಿ ಶಂಕರಾಚಾರ್ಯರ ಬೋಧನೆಗಳ ಪರಿಣಾಮ” ಕುರಿತು ಭಕ್ತ ವೃಂದಕ್ಕೆ ಉಪನ್ಯಾಸ ನೀಡಿದ ಅವರು, ಸಂತರು, ಯೋಗಿಗಳು ದೈನಂದಿನ ಬದುಕಿನಲ್ಲಿ ಯೋಗದ ಮಹತ್ವ ಮತ್ತು ಯೋಗ ತತ್ವಗಳನ್ನು ಬೋಧಿಸಿದ್ದಾರೆ. ಇದರಿಂದ ಪ್ರೇರಣೆ ಪಡೆದ 60 ವರ್ಷಗಳಿಂದ ಯೋಗ ಕಲಿಯುವ, ಕಲಿಸುವ ಕಾಯಕದಲ್ಲಿ ನಿರತವಾಗಿದ್ದೇನೆ. ಸನಾತನ ಧರ್ಮ ಸಂರಕ್ಷಣೆಯಲ್ಲಿ ಆದಿ ಶಂಕರಾಚಾರ್ಯರ ಕೊಡುಗೆ ಅನನ್ಯ,. ಧರ್ಮ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಅವರು ಸದಾ ಸ್ಮರಣೀಯರು ಎಂದು ಹೇಳಿದರು.

ಮೈಸೂರಿನ ಕೆ.ಆರ್. ನಗರದ ಯೆಡತೊರೆ ಮಠದ ಯೋಗಾನಂದೇಶ್ವರ ಸರಸ್ವತಿ ಮಠದ ಡಾ. ಶಂಕರ ಭಾರತಿ ಮಹಾ ಸ್ವಾಮೀಜಿ ಮಾತನಾಡಿ, ಶಂಕರಭಗವತ್ಪಾದರು ಪತಂಗದ ಯೋಗ ಶಾಸ್ತ್ರವನ್ನೂ ಸಹ ಬೋಧಿಸಿದ್ದು, ಇದು ಆಧುನಿಕ ಬದುಕಿಗೂ ಪೂರಕವಾಗಿದೆ. ಧರ್ಮದ ಪುನರುತ್ಥಾನಕ್ಕೆ ಯೋಗ ಅತ್ಯಂತ ಅಗತ್ಯವಾಗಿದೆ. ಭಾರತೀಯ ಸಂಸ್ಕೃತಿಯ ಮೇಲೆ ಇದು ಗಾಢವಾದ ಪ್ರಭಾವ ಬೀರಿದೆ. ಯೋಗ ಶಾಸ್ತ್ರದಿಂದ ಜೀವನದ ಶಾರೀರಿಕ ಆರೋಗ್ಯವಷ್ಟೇ ಅಲ್ಲದೇ ತನ್ಮೂಲಕ ಭಗವಂತನ್ನು ಏಕಾಗ್ರ ಚಿತ್ತದಿಂದ ಧ್ಯಾನಿಸಲು ಮತ್ತು ಏಕಾತ್ಮ ಭಾವನೆಯನ್ನು ಹೊಂದಲು ಇದು ಪ್ರಮುಖ ಸಾಧನವಾಗಿದೆ. ಆಧ್ಯಾತ್ಮಿಕ ಚಿಂತನೆ ಜೊತೆಗೆ ಇಂದ್ರಿಯಗಳ ನಿಗ್ರಹ ಮಾಡಿಕೊಳ್ಳಲು ಪೂರಕವಾಗಿದೆ ಎಂದು ಹೇಳಿದರು.

ಬೆಂಗಳೂರಿನ ರಾಮಕೃಷ್ಣ ಮಠದ ವಿರೇಶಾನಂದಾಜಿ ಮಹಾರಾಜ್ ಮಾತನಾಡಿ, ಆದಿ ಶಂಕರಾಚಾರ್ಯರ ಬೋಧನೆಗಳಲ್ಲಿ ಧರ್ಮ ಸೂಕ್ಷ್ಮತೆಯ ಒಳನೋಟವಿರುತ್ತದೆ. ಧರ್ಮದ ರಕ್ಷಣೆಯಲ್ಲಿ ಅವರ ಚಿಂತನೆಗಳು, ಬೋಧನೆಗಳು ಅನನ್ಯ. ಆದಿ ಶಂಕರರ ಏಕಾತ್ಮ ಭಾವವು ಸರ್ವಾತ್ಮ ಭಾವವಾಗಿದೆ. ಇದು ಭಾರತಕ್ಕೆ ಮಾತ್ರ ಸೀಮಿತವಲ್ಲ. ಇಡೀ ಮನುಕುಲಕ್ಕೆ ಅತ್ಯಂತ ಅಗತ್ಯವಾಗಿದೆ. ಏಕಾಗ್ರತೆಯಿಂದ ಧ್ಯಾನಿಸಲು ಮತ್ತು ಏಕಾತ್ಮ ಭಾವವನ್ನು ಹೊಂದಲು ಮುಖ್ಯ ಸಾಧನವಾಗಿದೆ. ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಚಿಂತೆನಗಳು ಸಹ ಅತ್ಯಂತ ಶ್ರೇಷ್ಠ ಎಂದು ಹೇಳಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ