ತುಂಗಭದ್ರಾ ಜಲಾಶಯದ ಹಿನ್ನೀರಿನ ಕಂದಕ್ಕೆ ಬಿದ್ದು ಓರ್ವ ಸಾವು

ಹೊಸಪೇಟೆ : ಬೈಕ್ ಸ್ಕೀಡ್ ಆಗಿ ಜಲಾಶಯದ ಹಿನ್ನೀರಿನ ಕಂದಕಕ್ಕೆ ಬಿದ್ದು ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಯುವಕ ಗಂಭೀರ   ಗಾಯಗೊಂಡ ಘಟನೆ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ.

ಯುವಕರು ಬೆಂಗಳೂರಿನಿಂದ ಇಳಕಲ್ ಗೆ ಬೈಕ್ ನಲ್ಲಿ ತೆರಳುತ್ತಿದ್ದರು ಎನ್ನಲಾಗಿದ್ದು, ಇಬ್ಬರೂ ಇಳಕಲ್ ಮೂಲದವರು ಎಂದು ತಿಳಿದುಬಂದಿದೆ. 

ರಭಸವಾಗಿ ಬಂದು ತುಂಗಭದ್ರಾ ಜಲಾಶಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಯುವಕರು  ಆಳಕ್ಕೆ ಬಿದ್ದಿದ್ದಾರೆ. ಅಪಘಾತದಲ್ಲಿ ಜಗದೀಶ್ ಎಂಬ ಯುವಕ ಸಾವನ್ನಪ್ಪಿದ್ದು, ಶಶಾಂಕ್ ಪಾಟೀಲ್ ಎಂಬ ಯುವಕ ಗಂಭೀರ ಗಾಯಗಳಿಂದ ನರಳುವಂತಾಗಿದೆ.

ಗಾಯಗೊಂಡ ಯುವಕನನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮರಿಯಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ  ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top