ನಾಯಕನಹಟ್ಟಿ : ಹೋಬಳಿಯ ತೊರೆಕೋಲಮ್ಮನಹಳ್ಳಿ ಗ್ರಾಮದ ಗ್ರಾಮೀಣ ಪ್ರದೇಶದ ಅತ್ಯಂತ ಬಡ ಕುಡುಂಬದಲ್ಲಿ ಜನಿಸಿದ ನಾಗೇಶರವರು ಕನ್ನಡ ಭಾಷೆ ಅಭ್ಯಾಸ ಪುಸ್ತಕಗಳ ಭಾಷಿಕ ಮತ್ತು ಶೈಕ್ಷಣಿಕ ಅಧ್ಯಯನ ಎಂಬ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ. ಪದವಿಯನ್ನು ಪಡೆದುಕೊಂಡಿದ್ದಾರೆ.
![](https://kannadanadunews.in/wp-content/uploads/2024/01/WhatsApp-Image-2024-01-11-at-16.24.08_6be5b685-1024x461.jpg)
ಕನ್ನಡ ವಿಶ್ವವಿದ್ಯಾಲಯದ ಡಾ.ಅಶೋಕ್ಕುಮಾರ್ ರಂಜೇರೆ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಪಿಹೆಚ್ ಡಿ ಪದವಿ ಲಭಿಸಿದ್ದು, ನಿನ್ನೆ ಸಂಜೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆದ ನುಡಿಹಬ್ಬ ಕಾರ್ಯಕ್ರಮದಲ್ಲಿ ಕುಲಪತಿಗಳಾದ ಡಾ. ವಿ. ಪರಮಶಿವಮೂರ್ತಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಿ.ಹೆಚ್.ಡಿ. ಪದವಿಯನ್ನು ಪ್ರಧಾನ ಮಾಡಿದರು.
ನಾಗೇಶ್ ಅವರ ಕುಟುಂಬಸ್ಥರು ಸೇರಿದಂತೆ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.
Facebook
Twitter
LinkedIn
WhatsApp
Email
Print
Telegram