ಮರಿಯಮ್ಮನಹಳ್ಳಿ,,ಫೆ,27 : ಪಟ್ಟಣದ 9ನೇ ವಾರ್ಡಿನ ಅಂಗನವಾಡಿ ಕೇಂದ್ರದಲ್ಲಿ ಐದು ವರ್ಷದ ಒಳಗಿನ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಟ್ಟಣ ಪಂಚಾಯತಿ ನೂತನ ಸದಸ್ಯೆ ರೋಗಣ್ಣಿ ಶ್ರೀಮತಿ ಲಕ್ಷ್ಮೀ ಮಂಜುನಾಥ ರವರು ಲಸಿಕೆ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಿದರು. ನಂತರ ಮಾತನಾಡಿ, ಮಕ್ಕಳ ಸಲುವಾಗಿ ಮುಂಜಾಗ್ರತ ಕ್ರಮವಾಗಿ ಲಸಿಕೆ ಹಾಕಲಾಗುತ್ತಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಿ. ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಜೀವ ರಕ್ಷಣೆಗೆ ಎರಡು ಹನಿ ಲಸಿಕೆ ಹಾಕಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ಯಾಮಲಾ, ಆಶಾ ಕಾರ್ಯಕರ್ತೆ ರೇಣುಕಾ ಮತ್ತು ರೋಗಣ್ಣಿ ಮಂಜುನಾಥ ಇದ್ದರು.
![](http://www.kannadanadunews.in/wp-content/uploads/2022/02/WhatsApp-Image-2022-02-27-at-4.31.59-PM-1024x768.jpeg)
![](http://www.kannadanadunews.in/wp-content/uploads/2022/02/WhatsApp-Image-2022-02-27-at-4.32.00-PM-1024x768.jpeg)