ಬಳ್ಳಾರಿ : ಬಳ್ಳಾರಿ ವಿವಿಯ ಕುಲಪತಿಗಳಾಗಿದ್ದ ಸಿದ್ದು ಪಿ ಅಲಗೂರು ಅವರು ನಿವೃತ್ತಿ ಹೊಂದಿದ ನಂತರ ಸರಿ ಸುಮಾರು ಎಂಟು ತಿಂಗಳ ಕಾಲ ಪ್ರಭಾರಿ ಕುಲಪತಿಗಳೇ ಆಡಳಿತ ನಡೆಸುತ್ತಿದ್ದರು. ಈ ಸ್ಥಾನ ಭರ್ತಿ ಮಾಡಲು ಇದೀಗ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ ಎಂ ಮೇತ್ರಿ ಅವರು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ನೇಮಕಗೊಂಡಿದ್ದಾರೆ.
![](https://kannadanadunews.in/wp-content/uploads/2024/03/Untitled-1-1024x715.jpg)
ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಾ. ಮೇತ್ರಿ ಅವರನ್ನು ನಾಲ್ಕು ವರ್ಷಗಳ ಅವಧಿಗೆ ವಿ.ಎಸ್.ಕೆ. ವಿವಿಯ ಕುಲಪತಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
![](https://kannadanadunews.in/wp-content/uploads/2024/03/WhatsApp-Image-2024-03-06-at-1.01.47-AM-683x1024.jpeg)
ಕಲ್ಯಾಣ ಕರ್ನಾಟಕದ ಬೀದರ್ ಮೂಲದ ಡಾ ಕೆ ಎಂ ಮೇತ್ರಿ ಅವರು ಕಳೆದ ಎರಡೂವರೆ ದಶಕಗಳಿಂದ ಹಂಪಿ ಕನ್ನಡ ವಿವಿಯ ಪ್ರಾಧ್ಯಾಪಕರಾಗಿ, ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾಗಿ, ಡೀನ್ ರಾಗಿ ಕಾರ್ಯನಿರ್ವಹಿಸಿದ್ದಾರೆ. ವಿವಿಯ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.