ಬಳ್ಳಾರಿ: ಘನತೆವೆತ್ತ ರಾಜ್ಯಪಾಲರ ಸಚಿವಾಲಯದ ಅಧಿಸೂಚನೆ ಮೇರೆಗೆ, ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯನ್ನಾಗಿ ಅನ್ವಯಿಕ ವಿಜ್ಞಾನ ನಿಕಾಯದ ಡೀನರಾದ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಯವರ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರು ಇಂದು ಅಧಿಕಾರ ಸ್ವೀಕರಿಸಿದರು.
Facebook
Twitter
LinkedIn
Telegram
WhatsApp
Email
Print