ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಬಿ.ನಾಗೇಂದ್ರ

ಬಳ್ಳಾರಿ: ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಮಂಗಳವಾರ ಪರಿಶಿಷ್ಟ ಪಂಗಡ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಚುನಾವಣೆಯಲ್ಲಿ ಶತತ ಪರಿಶ್ರಮದಿಂದ ನನ್ನನ್ನು ಗೆಲ್ಲಿಸಿ ಸಚಿವರಾಗಿ ಮಾಡಿದ್ದಿರಿ. ನಿಮಗೆಲ್ಲರಿಗೂ ನಾನು ಆಭಾರಿಯಾಗಿರುತ್ತೆನೆ. ನಮ್ಮ ಜಿಲ್ಲೆಯ ಜನರಿಗೆ ಯಾವುದೇ ತೊಂದರೆಯಾಗದಂತೆ ನಾನು ಶ್ರಮವಹಿಸುತ್ತೇನೆ. ನಿಮ್ಮ ಸಮಸ್ಯೆ ಇದ್ದಲ್ಲಿ ನೇರವಾಗಿ ನನ್ನನ್ನು ಭೇಟಿ ಮಾಡಿ, ನಿಮ್ಮ ಸೇವೆಗೆ ನಾನು ಸದಾ ಸಿದ್ದ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಕಾಂಗ್ರೆಸ್ ನ  ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಪಾರ ಅಭಿಮಾನಿಗಳು ಹಾಜರಿದ್ದರು.

Facebook
Twitter
LinkedIn
Email
WhatsApp
Email
Telegram

Leave a Comment

Your email address will not be published. Required fields are marked *

Translate »
Scroll to Top