ಬೆಂಗಳೂರು,ಮಾ,18 : ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ವರದಿ ಜಾರಿ ಸೇರಿದಂತೆ ತಮ್ಮ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವ, ಶಾಸಕರಾದ ತುಕಾರಾಂ, ಶಾಸಕರಾದ ರಘುಮೂರ್ತಿ, ಅನಿಲ್ ಚಿಕ್ಕಮಾದು, ಮಾಜಿ ಶಾಸಕ ಮಧು ಬಂಗಾರಪ್ಪ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್ ಮತ್ತಿತರರು ಉಪಸ್ಥಿತರಿದ್ದರು.
