ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ಇನ್ನಿಲ್ಲ

ಬೆಂಗಳೂರು,ಫೆಬ್ರವರಿ,15 : ಕನ್ನಡದ ಚಿತ್ರ ರಂಗದ ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ (೮೪ ) ನಮ್ಮನ್ನು ಅಗಲಿದ್ದಾರೆ. ತಮ್ಮ ಸರಳ ಅಭಿನಯದ ಮೂಲಕ ಎಲ್ಲಾರ ಮನೆಮಾತಾಗಿದ್ದ ಅವರು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಿನ್ನೆ ಸಂಜೆ ಬೆಂಗಳೂರಿನಲ್ಲಿ ೭:೩೦ರ ವೇಳೆಗೆ ಕೊನೆ ಉಸಿರೆಳೆದಿದ್ದಾರೆ.

ಮಂಥನಾ, ಮುಕ್ತಾ ಧಾರಾವಾಹಿಗಳ ಮೂಲಕ ಪ್ರಸಿದ್ಧರಾಗಿದ್ದ ಇವರು, ಎರಡು ಕನಸು, ಪಲ್ಲವಿ ಅನುಪಲ್ಲವಿ, ಬಾ ನಲ್ಲೆ ಮಧುಚಂದ್ರಕೆ, ಮುಯ್ಯಿ, ಅಂತಿಮ ಘಟ್ಟ, ಪ್ರೊಫೆಸರ್ ಹುಚ್ಚೂರಾಯ, ಜಂಬೂ ಸವಾರಿ, ಇದೊಳ್ಳೆ ರಾಮಾಯಣ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top