ಹಿರಿಯ ಪತ್ರಕರ್ತರಾದ ನಂಜುಂಡಪ್ಪ.ವಿ, ರಮೇಶ್ ಪಾಳ್ಯ, ಶಶಿಧರ್ ಹೆಗಡೆ ನಂದಿಕಲ್ ಮತ್ತಿತರರಿಗೆ 2023 ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ನಿರೂಪಕ ನಂಜುಂಡಪ್ಪ.ವಿ, ಈ ಸಂಜೆ ವಿಶೇಷ ವರದಿಗಾಗಿ ರಮೇಶ್ ಪಾಳ್ಯ, ವಿಜಯ ಕರ್ನಾಟಕ ಪತ್ರಿಕೆಯ ಪೊಲಿಟಿಕ್ ಎಡಿಟರ್ ಶಶಿಧರ್ ಹೆಗಡೆ ನಂದಿಕಲ್ ಮತ್ತಿತರರು ಭಾಜನರಾಗಿದ್ದಾರೆ.

ದೂರದರ್ಶನ ಮತ್ತು ಆಕಾಶವಾಣಿ ನಿರೂಪಕ, ಹಿರಿಯ ಪತ್ರಕರ್ತ ನಂಜುಂಡಪ್ಪ.ವಿ ಅವರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಲಭಿಸಿದ್ದು, ರಮೇಶ್ ಪಾಳ್ಯ ಅವರಿಗೆ ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿ ಸಂದಿದೆ. ಶಶಿಧರ್ ಹೆಗಡೆ ನಂದಿಕಲ್ ಅವರಿಗೆ ಅತ್ಯುತ್ತಮ ರಾಜಕೀಯ ವಿಮರ್ಶೆಗಾಗಿ ಖಾದ್ರಿ ಶಾಮಣ್ಣ ಪ್ರಶಸ್ತಿ ದೊರೆತಿದೆ. 

 

ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿಪುರಸ್ಕೃತ ಪಟ್ಟಿ ಪ್ರಕಟಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ್, ದಾವಣಗೆರೆಯಲ್ಲಿ ಫೆ. 3 ಮತ್ತು 4 ರಂದು ನಡೆಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಪ್ರಶಸ್ತಿಗಳ ವಿವರ:

ಕೆಯುಡಬ್ಲೂಜೆ ವಿಶೇಷ ಪ್ರಶಸ್ತಿ:ನಿರ್ಮಲ ಎಲಿಗಾರ್, ಬೆಂಗಳೂರು., ಪಿ.ಬಿ.ಹರೀಶ್ ರೈ, ಮಂಗಳೂರು ಪ್ರಕಾಶ್ ಮಸ್ಕಿ, ರಾಯಚೂರು ಕೆ.ಎಸ್.ಭಾಸ್ಕರ ಶೆಟ್ಟಿ, ಬೆಂಗಳೂರು , ರಾಧಾಕೃಷ್ಣ ಭಟ್ ಭಟ್ಕಳ, ಉತ್ತರ ಕನ್ನಡ. , ವೆಂಕಟೇಶ್ ಮೂರ್ತಿ, ಕಲಬುರ್ಗಿ. ಅರವಿಂದ ನಾವಡ, ಉಡುಪಿ, ರಾಜಶೇಖರ ಜೋಗಿನ್ಮನೆ ರಮೇಶ್ ಪಾಳ್ಯ

 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) ಸಣ್ಣವಂಡ ಕಿಶೋರ್ ನಾಚಪ್ಪ, ಮಡಿಕೇರಿ

ಸಂಶುದ್ದೀನ್ ಕೆ.ಎಣ್ಣೂರು, ವಾರ್ತಾಭಾರತಿ, ಮಂಗಳೂರು

2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ) ಸಿ.ಎನ್.ಶಿವಶಂಕರ, ದೂರದರ್ಶನ ವರದಿಗಾರ, ಕೋಲಾರ ಎಂ.ಎನ್.ಯೋಗೇಶ್, ಪ್ರಜಾವಾಣಿ, ಮಂಡ್ಯ

3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ತನಿಖಾ ವರದಿಗೆ) ಡಿ.ಉಮೇಶ್ ನಾಯ್ಕ, ವಿಜಯವಾಣಿ, ತರೀಕೆರೆ ಎಲ್.ದೇವರಾಜ್, ವಿಜಯ ಕರ್ನಾಟಕ,

4. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿಗೆ) ಚಂದ್ರಹಾಸ ಹಿರೇಮಳಲಿ, ಪ್ರಜಾವಾಣಿ, ಬೆಂಗಳೂರು ಎಸ್.ಶ್ರೀಧರ, ವಿಜಯ ಕರ್ನಾಟಕ, ರಾಮನಗರ

5. ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿಗೆ) ಮಂಜುನಾಥ, ಜಾದಗೆರೆ, ವಿಜಯ ಕರ್ನಾಟಕ, ಬೆಂಗಳೂರು ಇಬ್ರಾಹೀಂ ಖಲೀಲ್ ಬನ್ನೂರು, ವಾರ್ತಾಭಾರತಿ

6.  ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶೆ) ಡಿ.ಎಚ್.ಸುಖೇಶ್, ಪಬ್ಲಿಕ್ ಟಿವಿ

7. ಮಂಗಳ ಎಂ.ಸಿ.ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆ ವಿಭಾಗ) ಕಾರಂತ ಪೆರಾಜೆ, ಅಡಿಕೆ ಪತ್ರಿಕೆ, ಪುತ್ತೂರು, ರಾಘವೇಂದ್ರ ತೊಗರ್ಸಿ, ಸುಧಾ

8. ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ (ಅತ್ಯುತ್ತಮ ಸುದ್ದಿ ಛಾಯಾಚಿತ್ರಕ್ಕೆ) ಕೆ.ಆರ್. ಯೋಗೀಶ, ಜನಮಿತ್ರ, ಕಡೂರು ತಾಜುದ್ದೀನ್ ಅಜಾದ್, ಡೆಕ್ಕನ್ ಹೆರಾಲ್ಡ್, ಕಲಬುರಗಿ

9. ಅತ್ಯುತ್ತಮ ಪೋಟೋಗ್ರಫಿ: ಪಿ.ಕೆ.ಬಡಿಗೇರ, ಬೆಳಗಾವಿ. ನಟರಾಜ್, ಹಾಸನ. ಅನುರಾಗ್ ಬಸವರಾಜು, ಮೈಸೂರು

 10.ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ಅತ್ಯುತ್ತಮ ಲೇಖನಕ್ಕೆ)

ಪ್ರಕಾಶ್ ಎಸ್.ಶೇಟ್, ವಿಜಯವಾಣಿ, ಹುಬ್ಬಳ್ಳಿ, ಅಮರೇಶ ದೇವದುರ್ಗ, ರಾಯಚೂರು.

11.ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ವನ್ಯಪ್ರಾಣಿಗಳ ಕುರಿತ ಅತ್ಯುತ್ತಮ ಲೇಖನಕ್ಕೆ) ಅಖಿಲೇಶ್ ಚಿಪ್ಪಲಿ, ಪ್ರಜಾವಾಣಿ, ಶಿವಮೊಗ್ಗ

12.ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿಗೆ) ಶಶಿಕಾಂತ್ ಎಸ್.ಶಂಬಳ್ಳಿ, ಪ್ರಜಾವಾಣಿ, ಬೀದರ್ ಪ್ರಕಾಶ್ ಬಾಳಕ್ಕನವರ್, ಪ್ರಜಾವಾಣಿ, ಬಾಗಲಕೋಟೆ

 

13. ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ಅತ್ಯುತ್ತಮ ವರದಿಗೆ) ಪಿ.ಶಾಂತಕುಮಾರ್, ಕನ್ನಡ ಪ್ರಭ, ಅರಸೀಕೆರೆ. ಹೆಚ್.ಕೆ.ರಾಘವೇಂದ್ರ, ಕೋಲಾರ ಪತ್ರಿಕೆ, ಕೋಲಾರ

14; ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ತೃಪ್ತಿ ಕುಂಬ್ರಗೋಡು, ಉದಯವಾಣಿ ಎಚ್.ಆರ್.ಅಶ್ವಿನಿ, ವಿಜಯವಾಣಿ, ಬೆಂಗಳೂರು.

15. ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ ( ಅತ್ಯುತ್ತಮ ಕೃಷಿ ವರದಿ) ಬರಗೂರು ವಿರೂಪಾಕ್ಷಪ್ಪ, ಪ್ರಜಾಪ್ರಗತಿ, ಶಿರಾ, ತುಮಕೂರು ಜಿಲ್ಲೆ ಮಾಳಿಂಗರಾಯ ಪೂಜಾರ, ಲಕ್ಷ್ಮೀಶ್ವರ, ಗದಗ

16.ನಾಡಿಗೇರ ಕೃಷ್ಣರಾಯರ ಪ್ರಶಸ್ತಿ: ರಂಜಿತ್ ಅಶ್ವತ್, ವಿಶ್ವವಾಣಿ, ಎನ್. ರಾಘವೇಂದ್ರ, ಸಂಪಾದಕರು, ವಿನೋದ ಪತ್ರಿಕೆ

17.ಅತ್ಯುತ್ತಮ ಪುಟ ವಿನ್ಯಾಸ (ಡೆಸ್ಕ್) ಜಿ.ಎಂ.ಕೊಟ್ರೇಶ್, ಕನ್ನಡ ಪ್ರಭ ಹೆಚ್.ಕೆ.ರವೀಂದ್ರನಾಥ ಹೊನ್ನೂರು

18.ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿ: ಎಸ್.ಶ್ಯಾಮ್ ಪ್ರಸಾದ್, ಪಿಟಿಐ, ಬೆಂಗಳೂರು

19.ಸುಣ್ಣವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ. (ಅತ್ಯುತ್ತಮ ಸೇನಾ ವರದಿಗೆ) ಅನುಕಾರ್ಯಪ್ಪ, ರಿಪಬ್ಲಿಕ್ ಕನ್ನಡ ಟಿವಿ, ಕೊಡಗು ಜಿಲ್ಲೆ

20.ಕೆ.ಎನ್.ಸುಬ್ರಮಣ್ಯ ಪ್ರಶಸ್ತಿ ( ಇಂಗ್ಲೀಷ್ ಪತ್ರಿಕೆಯಲ್ಲಿ ಪ್ರಕಟವಾದ ವರದಿ)  ಪವನ್ ಕುಮಾರ್ ಹೆಚ್, ಡೆಕ್ಕನ್ ಹೆರಾಲ್ಡ್, ಉತ್ತರ ಕನ್ನಡ ಅಕ್ಷಯ ಪಿ.ವಿ., ಸ್ಟಾರ್ ಆಫ್ ಮೈಸೂರು, ಕೊಡಗು

21.ಟಿ.ಕೆ.ಮಲಗೊಂಡ ಪ್ರಶಸ್ತಿ (ಅತ್ಯುತ್ತಮ ತನಿಖಾ ವರದಿ) ಸಿದ್ದು ಆರ್.ಜಿ.ಹಳ್ಳಿ, ಹಾವೇರಿ, ಪ್ರಜಾವಾಣಿ ಶಶಿಕಾಂತ್ ಮೆಂಡೇಗಾರ, ಬಿಜಾಪುರ.

22.ಅಪ್ಪಾಜಿಗೌಡ (ಸಿನಿಮಾ ಪ್ರಶಸ್ತಿ-ಚಲನಚಿತ್ರ ವರದಿಗೆ) ಅರುಣ್ ಕುಮಾರ, ಬೆಂಗಳೂರು ಬಬಿತಾ ಎಸ್. ವಿಜಯ ಕರ್ನಾಟಕ

23.ತಗಡೂರು ಕಮಲಮ್ಮ ವೀರೇಗೌಡ ಪ್ರಶಸ್ತಿ: ಬಿ.ಸಿ.ಚನ್ನೇಗೌಡ, ಚನ್ನರಾಯಪಟ್ಟಣ ಗುರುರಾಜ್ ಕುಲಕರ್ಣಿ, ಸಂಯುಕ್ತ ಕರ್ನಾಟಕ, ಬೀದರ್

24. ಬದರೀನಾಥ್ ಹೊಂಬಾಳೆ ಪ್ರಶಸ್ತಿ: ಕೆ.ಎನ್.ಪುಟ್ಟಲಿಂಗಯ್ಯ, ಸಂಪಾದಕರು, ಉದಯಕಾಲ ವೆಂಕಟೇಶ್ ಬಿ. ಇಮ್ರಾಪುರ, ಹೊಸ ದಿಗಂತ, ಗದಗ

25. ಅಭಿಮಾನಿ ಪ್ರಕಾಶನ ಪ್ರಶಸ್ತಿ: ವಿರೂಪಾಕ್ಷ ಕೆ. ಕವಟಗಿ, ವಿಜಯ ಕರ್ನಾಟಕ, ಚಿಕ್ಕೋಡಿ ಶಿವರಾಜ್ ಕೆಂಭಾವಿ, ಉದಯವಾಣಿ, ಲಿಂಗಸೂಗೂರು

26. ಗುಡಿಹಳ್ಳಿ ನಾಗರಾಜ್ ಪ್ರಶಸ್ತಿ: ಎಂ.ಎನ್.ಅಹೋಬಳಪತಿ, ವಿಜಯ ಕರ್ನಾಟಕ, ಚಿತ್ರದುರ್ಗ ಶ್ರೀಧರ್ ನಾಯಕ್, ಹಿರಿಯ ಪತ್ರಕರ್ತರು

27. ರವಿ ಬೆಳಗೆರೆ ಪ್ರಶಸ್ತಿ:ಟಿ. ಗುರುರಾಜ್, ಸಂಪಾದಕರು, ಹಲೋ ಮೈಸೂರು ಜಗದೀಶ್ ಬೆಳ್ಳಿಯಪ್ಪ, ಟಿವಿ-9

 27.ಅತ್ಯುತ್ತಮ ತನಿಖಾ ವರದಿ: ನ್ಯೂಸ್ ಫಸ್ಟ್, ಬೆಂಗಳೂರು (ಅಂಗನವಾಡಿಗಳಿಗೆ ಮೊಟ್ಟೆ ಸರಬರಾಜು ಹಗರಣ)

 28.ವಿದ್ಯುನ್ಮಾನ ಟಿ.ವಿ ವಿಭಾಗ: ಹರೀಶ್ ನಾಗರಾಜ್, ವಿಸ್ತಾರ ಟಿವಿ, ನವಿತಾ ಜೈನ್, ನ್ಯೂಸ್ 18, ರಾಚಪ್ಪ ಜೀ ಟಿವಿ

 

ದಶರಥ, ಟಿವಿ-5 ಮನೋಜ್ ಕುಮಾರ್, ಪವರ್ ಟಿವಿ ಮೋಹನ್ ರಾಜ್, ಕ್ಯಾಮರಾಮೆನ್, ಸುವರ್ಣ ಟಿವಿ

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top