ಕಂಟೇರ್ನಲ್ಲಿ ಕಾಣಿಸಿಕೊಂಡ ಬೆಂಕಿ

ವಿಜಯನಗರ: ಹೊಸಪೇಟೆ ತಾಲೂಕಿನ ವ್ಯಾಸನಕೆರೆ ಗ್ರಾಮದ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಂಟೇನರ್ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

        ಚಂಡಿಗಢ ನಿಂದ ಬೆಂಗಳೂರಿಗೆ ಮೆಡಿಸನ್ ತರುತ್ತಿದ್ದ ಕಂಟೇನರ್ ಲಾರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾನೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Comment

Your email address will not be published. Required fields are marked *

Translate »
Scroll to Top