ಮೈಸೂರು :ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಮ್ ಅವರ ಪ್ರತಿಮೆಯನ್ನು ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್, ಸಂಸದ ಡಾ. ಎಲ್ . ಹನುಮಂತಯ್ಯ,
ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಡಾ. ತಿಮ್ಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರುಗಳಾದ ಕೆ.ಎಚ್. ಮುನಿಯಪ್ಪ, ಡಾ. ಎಚ್.ಸಿ. ಮಹಾದೇವಪ್ಪ, ಆರ್.ಬಿ. ತಿಮ್ಮಾಪುರ, ಶಿವಣ್ಣ, ಎಚ್. ಆಂಜನೇಯ ಹಾಜರಿದ್ದರು.

