ಸ್ಪೀಕರ್ ಯು.ಟಿ. ಖಾದರ್ ಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ; ಸಚಿವ ಬಿ.ನಾಗೇಂದ್ರ ಅಭಿನಂದನೆ

ಬೆಂಗಳೂರು : ಒಡಿಶಾ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಗೋಪಾಲ್ ಗೌಡರವರ ಅಧ್ಯಕ್ಷತೆಯ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಲೆಕ್ಚುವಲ್ಸ್ ಸಂಸ್ಥೆಯಿಂದ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ‘ ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 

ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಭಾರತೀಯ ಬುದ್ದಿಜೀವಿಗಳ ಸಮ್ಮೇಳನದಿಂದ ‘ ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪಡೆದ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಅಭಿನಂದನೆ ತಿಳಿಸಿದರು.

ಸಂಸ್ಥೆಯು ಈ ಹಿಂದೆ ಹಿರಿಯ ನ್ಯಾಯಾಧೀಶರು, ಕಲಾವಿದರು, ವ್ಯಾಪಾರ ಉದ್ಯಮಿಗಳು, ವಿಜ್ಞಾನಿಗಳು ಮತ್ತು ಇತರೆ ಬುದ್ಧಿಜೀವಿಗಳು ಸೇರಿದಂತೆ ಪ್ರತಿಷ್ಠಿತ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದೆ, ಇನ್ನೂ ಮುಂದೆ ಯು.ಟಿ ಖಾದರ್ ಸ್ಪೀಕರ್ ಆಗಿ ಹೀಗೆ ಮುಂದುವರೆದು ಉತ್ತಮ ಕೆಲಸ ಮಾಡಿ ಇನ್ನೂ ಹಲವು ಪ್ರಶಸ್ತಿಗಳನ್ನು ತಮ್ಮ ಮುಡಿಗೆರಿಸಿಕೊಳ್ಳಲಿ ಎಂದು ಸಚಿವ ಬಿ.ನಾಗೇಂದ್ರ ಅವರು ಹಾರೈಸಿದರು.

Facebook
Twitter
LinkedIn
WhatsApp
Telegram
Email

Leave a Comment

Your email address will not be published. Required fields are marked *

Translate »
Scroll to Top