ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು

ಬಳ್ಳಾರಿ,ಮಾ.26 : ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬಳ್ಳಾರಿ ನಗರದ ತಮ್ಮ ಸ್ವಗೃಹದಲ್ಲಿ ಶನಿವಾರ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.


ಅತ್ಯಂತ ಸಂಯಮದಿಂದ ಸಮಸ್ಯೆಗಳನ್ನು ಹೊತ್ತುಕೊಂಡು ಜಿಲ್ಲೆಯ ವಿವಿಧೆಡೆಯ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಚಿವ ಶ್ರೀರಾಮುಲು ಅವರು ಸಮಸ್ಯೆಗಳನ್ನು ದಾಖಲಿಸಿಕೊಂಡು ಸಂಬಂಧಿಸಿದ ಅಧಿಕಾರಿಗಳಿಗೆ ಅವುಗಳನ್ನು ಇತ್ಯರ್ಥಪಡಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಸಣ್ಣ ಫಕ್ಕೀರಪ್ಪ,ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು ಸೇರಿದಂತೆ ಇನ್ನೀತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top