ಬಳ್ಳಾರಿ,ಡಿ.೭: ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಕನ್ನಡ ಪುಸ್ತಕಗಳ ಪ್ರದರ್ಶನವು ಬೆಂಗಳೂರಿನ ಪಶ್ಚಿಮ ವಲಯ ಹಂಪಿನಗರದ ನಗರ ಕೇಂದ್ರ ಗ್ರಂಥಾಲಯದ ಗ್ರಂಥಾಂಗಣದಲ್ಲಿ ಡಿ.೧೩ರಿಂದ ೧೫ರ ವರೆಗೆ ನಡೆಯಲಿದೆ ಎಂದು ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು, ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಡಿ.೧೭ರ ಒಳಗಾಗಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ೪ನೇ ಮಹಡಿ, ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಮನವಿಗಳನ್ನು ಸಲ್ಲಿಸಬೇಕು. ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.