Ballari

ಕಾಲೇಜಿನ ಪ್ರಾಂಶುಪಾಲರಿಂದ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ

ಬಳ್ಳಾರಿ: ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಉಪನ್ಯಾಸಕಿಯೊಬ್ಬರಿಗೆ ಕಾಲೇಜಿನ ಪ್ರಾಚಾರ್ಯರು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ, ಉಪನ್ಯಾಸಕಿಯು ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.   ನಿವೃತ್ತಿಯ ಅಂಚಿನಲ್ಲಿರುವ ಪ್ರಾಚಾರ್ಯರು, ಸದರಿ ಉಪನ್ಯಾಸಕಿಯ ಜೊತೆ ಅಸಭ್ಯವಾಗಿ ನಡೆದು ಕೊಂಡಿದ್ದಾರೆಂದೂ, ಆಗಾಗ್ಗೆ ಅನುಚಿತವಾಗಿ ವರ್ತಿಸುತ್ತಿದ್ದರೆಂದೂ ಹೇಳಲಾಗಿದೆ. ನಗರದ ಎಎಸ್‌ಎಂ ಮಹಿಳಾ ಕಾಲೇಜಿನ ಪ್ರಾಚಾರ್ಯರಾಗಿದ್ದ ಶರಣಪ್ಪ ಅವರ ವಿರುದ್ಧ ಅದೇ ಕಾಲೇಕಿನ ಉಪನ್ಯಾಸಕಿಯೋರ್ವರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈಗ್ಗೆ ಕೆಲ …

ಕಾಲೇಜಿನ ಪ್ರಾಂಶುಪಾಲರಿಂದ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ Read More »

ಸುಳ್ಳು ಪ್ರಚಾರದಲ್ಲಿ ಬಿಜೆಪಿಗರು ನಿಸ್ಸೀಮರು: ಸಚಿವ ಬಿ.ನಾಗೇಂದ್ರ

ಬೆಂಗಳೂರು : ಸುಳ್ಳು ಪ್ರಚಾರ ಮಾಡುವುದರಲ್ಲಿ, ಸಣ್ಣದನ್ನು ದೊಡ್ಡದಾಗಿ ಬಿಂಬಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಯುವಜನ ಸೇವೆ ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ.

‘ಕಮಸಂ’ ಇಲಾಖೆಯಲ್ಲಿ ಅಕ್ರಮಗಳ ತನಿಖೆಗೆ ಆಗ್ರಹ

ಬಳ್ಳಾರಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಕಛೇರಿಗಳಲ್ಲಿ ನಡೆದಿರುವ ಅವ್ಯವಹಾರ-ಅಕ್ರಮಗಳ ಬಗ್ಗೆ ರಾಜ್ಯ ಸರ್ಕಾರ ಮತ್ತು ಸಚಿವರು ಸಮಗ್ರ ತನಿಖೆ ನಡೆಸುವಂತೆ ಬಳ್ಳಾರಿ ಜಿಲ್ಲಾ ಕಲಾವಿದರ ವೇದಿಕೆಯು ಆಗ್ರಹಪಡಿಸಿದೆ.

ಗ್ಯಾರೆಂಟಿ ಜಾರಿ ಮಾಡಿ ನುಡಿದಂತೆ ನಡೆದ ಕಾಂಗ್ರೆಸ್-ಉಗ್ರಪ್ಪ

ಬಳ್ಳಾರಿ : ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವ ನೀಡಿದ ಭರವಸೆಯಂತೆ, ಅಧಿಕಾರಕ್ಕೆ ಬಂದ ಕೂಡಲೇ ಮೊಟ್ಟಮೊದಲ ಸಚಿವ ಸಂಪುಟ ಸಭೆಯಲ್ಲಿಯೇ 5 ಗ್ಯಾರೆಂಟಿಗಳ ಈಡೇರಿಕೆಗೆ ಒಪ್ಪಿಗೆ ನೀಡಿ, ಅದರಂತೆಯೇ ಅವುಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಂಡಿದ್ದು, ನುಡಿದಂತೆಯೇ ನಡೆದು ತೋರಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

ಬಳ್ಳಾರಿಯ ಪ್ರಗತಿಗೆ ಶಕ್ತಿ ಮೀರಿ ಶ್ರಮಿಸುತ್ತೇವೆ ಎಂದ ಸಚಿವ ನಾಗೇಂದ್ರ

ಬಳ್ಳಾರಿ : ಬಳ್ಳಾರಿ ನಗರದ ಸರ್ವತೋಮುಖ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸುತ್ತೇವೆ ಬಳ್ಳಾರಿ ಮೇಯರ್ ತ್ರಿವೇಣಿಯವರು ದೇಶದಲ್ಲಿಯೇ ಅತ್ಯಂತ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂತೆಯೇ ಬಳ್ಳಾರಿ ನಗರ ಶಾಸಕ ಭರತ್‌ರೆಡ್ಡಿಯವರು ಕೂಡಾ ಯುವಕರಾಗಿದ್ದು, ನಾನು ಮತ್ತು ಸಂಸದ ಡಾ||ಸೈಯದ್ ನಾಸಿರ್ ಹುಸೇನ್ ಎಲ್ಲರೂ ಸೇರಿ ಬಳ್ಳಾರಿಯ ಪ್ರಗತಿಗೆ ಶಕ್ತಿಮೀರಿ ಶ್ರಮಿಸುವುದಾಗಿ ರಾಜ್ಯದ ಯುವಜನ ಸಬಲೀಕರಣ, ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.

ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಲಾರ: ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಕಲ್ಲು ಕ್ವಾರಿಯಲ್ಲಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ನಡೆದಿದೆ.

ಮೈಸೂರು ರಸ್ತೆ ಅಪಘಾತ; ಮೃತರ ಕುಟುಂಬಗಳಿಗೆ ಚೆಕ್ ವಿತರಿಸಿದ ಸಚಿವ ನಾಗೇಂದ್ರ

ಬಳ್ಳಾರಿ : ಮೈಸೂರು ಸಮೀಪ ಟಿ.ನರಸೀಪುರದ ಕುರುಬೂರು ಬಳಿ (ಮೇ.29) ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿದ್ದ ಬಳ್ಳಾರಿ ಜಿಲ್ಲೆ ಸಂಗನಕಲ್ಲು ಗ್ರಾಮದ ಮೃತರ ಕುಟುಂಬಸ್ಥರಿಗೆ ಭಾನುವಾರ ಸಂಜೆ ಸಚಿವ ಬಿ.ನಾಗೇಂದ್ರ ಅವರು ಪರಿಹಾರದ ಚೆಕ್ ವಿತರಣೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದಂತೆ ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು.

ರಾಜ್ಯದ ಎಲ್ಲಾ ಮಹಿಳೆಯರಿಗೂ ಬಸ್ ಪ್ರಯಾಣ ಉಚಿತ

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಸರ್ಕಾರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಿದ್ದು, ಯಾವುದೇ ಷರತ್ತು ವಿಧಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣ ಕುಂಠಿತ

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲುಕಿನಲ್ಲಿ ಮುಂಗಾರು ಪೂರ್ವ ಅವಧಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬಿತ್ತನೆ ಪ್ರಮಾಣವೂ ಇಳಿಮುಖವಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಂತೆ ಈ ವರ್ಷವೂ ಸಹ ಮಳೆ ಬೀಳಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಭಾರಿ ನಿರಾಸೆ ಮೂಡಿಸಿದೆ.

ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಮಂದಿ ಮೃತ್ಯು

ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದೆ.

Translate »
Scroll to Top