building

ಭೈರಸಂದ್ರ ವಾರ್ಡ್‌ ನಲ್ಲಿ ಡಾ. ಎ.ಪಿ.ಜೆ ಅಬ್ದುಲ್‌ ಕಲಾಂ ಪ್ರತಿಮೆ ನಿರ್ಮಾಣದ ಕಟ್ಟಡ ನೆಲಸಮ ಮಾಡಿದ ಬಿಬಿಎಂಪಿ ಅಧಿಕಾರಿಗಳು

ಬೆಂಗಳೂರು : ಜಯನಗರದ ೪ ಬ್ಲಾಕ್ ನ ಭೈರಸಂದ್ರ ವಾರ್ಡ್ ನ ತಿಲಕ್ ನಗರದಲ್ಲಿ ಕ್ಷಿಪಣಿ ಪಿತಾಮಹಾ, ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪ್ರತಿಮೆಯನ್ನು ಸರ್ವಸಮ್ಮತವಾಗಿ ಅನಾವರಣಗೊಳಿಸಲು ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲೇ ಬಿಬಿಎಂಪಿ ಅಧಿಕಾರಿಗಳು ಕಟ್ಟಡವನ್ನು ಧ್ವಂಸಗೊಳಿಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಅವರ ಕುಮ್ಮಕ್ಕು ಮತ್ತು ರಾಜಕೀಯ ದ್ವೇಷದಿಂದ ನಮ್ಮ ರಾಷ್ಟ್ರ ನಿರ್ಮಾಪಕರಾದ ಅಬ್ಧುಲ್ ಕಲಾಂ ಅವರ ಪ್ರತಿಮೆ ನಾಪತ್ತೆಯಾಗಿದ್ದು, ಅವರಿಗಾಗಿ ಕೈಗೊಂಡಿದ್ದ ನಿರ್ಮಾಣ ಚಟುವಟಿಕೆಗೆ ಬಿಬಿಎಂಪಿ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ ಎಂದು ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನೂತನ ಪೋಲಿಸ್ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬಳ್ಳಾರಿ: ಸಂಡೂರು ತಾಲೂಕಿನ ಚೋರನೂರು ಗ್ರಾಮದಲ್ಲಿ 3.58 ಕೋಟಿ ರೂ.ವೆಚ್ಚದಲ್ಲಿ ನೂತನ ಪೋಲಿಸ್ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಅತ್ಯಾಧುನಿಕ ಪೋಲಿಸ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಸ್ಮಾರ್ಟ್ ಪೋಲಿಸ್ಸಿಂ ಗ್‍ನಿಂದ ಅಪರಾಧ ತಡೆ, ಜನರ ಸುರಕ್ಷತೆ, ರಸ್ತೆ ಸುರಕ್ಷತೆ ಸೇರಿದಂತೆ ತಮ್ಮ ಕೆಲಸವನ್ನು ಪೋಲಿಸ್ ಪಡೆಗಳು ಇನ್ನಷ್ಟು ಪರಿಣಾಮಕಾರಿಯಾಗಿ …

ನೂತನ ಪೋಲಿಸ್ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ Read More »

ಬೇಲೂರು ಪುರಸಭೆ ನೂತನ ಆಡಳಿತಕ್ಕೆ ಅಂದದೊಂದಿಗೆ ಆಹ್ವಾನ

ಬೇಲೂರು : ಇಲ್ಲಿನ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಸೋಮವಾರ ನಡೆಯಲಿದ್ದು ಈ ಹಿನ್ನಲೆಯಲ್ಲಿ ಪುರಸಭೆಯನ್ನು ಅಂದಗೊಳಿಸಲಾಗುತ್ತಿದೆ.ಪುರಸಭೆಯ ಮುಂಭಾಗದಲ್ಲಿ ಹೆಚ್ಚುವರಿ ಕೊಠಡಿಗಳೊಂದಿಗೆ ಅಂದವಾದ ಪೋಟಿಕೊ ಅನ್ನು ನಿರ್ಮಿಸಲಾಗಿದ್ದು ಉದ್ಘಾಟನೆಯಷ್ಟೇ ಬಾಕಿಯಿತ್ತು. ಇದೀಗ ನೂತನ ಆಡಳಿತ ಮಂಡಳಿಗೆ ಉದ್ಘಾಟನೆ ಭಾಗ್ಯ ಕೂಡಿಬಂದಿದೆ. ಸೋಮವಾರ (ಅಕ್ಟೋಬರ್ ೪ ರಂದು) ಬೆಳಿಗ್ಗೆ ೧೧ ಗಂಟೆಗೆ ನಡೆಯಲಿರುವ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನಲೆಯಲ್ಲಿ ಪುರಸಭೆಯ ಮುಂಭಾಗವನ್ನು ಸ್ವಚ್ಛಗೊಳಿಸಿದ್ದಲ್ಲದೆ, ಪುರಸಭೆ ಬೇಲೂರು ಎಂಬುದಾಗಿ ಸೀಮೆಂಟಿನಿಂದ ಅಕ್ಷರ ಜೋಡಣೆ ಜೊತೆಗೆ ಹಿತ್ತಾಳೆಯ ಅಕ್ಷರದಲ್ಲೂ ಪುರಸಭೆ ಬೇಲೂರು ಹೆಸರು …

ಬೇಲೂರು ಪುರಸಭೆ ನೂತನ ಆಡಳಿತಕ್ಕೆ ಅಂದದೊಂದಿಗೆ ಆಹ್ವಾನ Read More »

Translate »
Scroll to Top