ಶೈಕ್ಷಣಿಕ ವಲಯದಲ್ಲಿ ಸುನ್ನಿ ಸ್ಟೂಡೆಂಟ್ಸ್ ಸೇವೆ ಶ್ಲಾಘನೀಯ -ಜಮೀರ್ ಅಹಮದ್
ಬೆಂಗಳೂರು : ಶೈಕ್ಷಣಿಕ ವಲಯದಲ್ಲಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಸೇವೆ ಶ್ಲಾಘನೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ.
ಬೆಂಗಳೂರು : ಶೈಕ್ಷಣಿಕ ವಲಯದಲ್ಲಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಸೇವೆ ಶ್ಲಾಘನೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ.
ಬೆಂಗಳೂರು :ಮದರಸಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್
ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಬೆಂಗಳೂರು: ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು: ಕಳೆದ ತಿಂಗಳು (ಜುಲೈ 2023) ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಲಿಂಗರಾಜ ಗಾಂಧಿ ಅವರು ಯು.ಕೆ. ದೇಶದ ವ್ಹೊಲ್ವರಹ್ಯಾಂಪ್ಟನ್ ವಿಶ್ವವಿದ್ಯಾನಿಲಯದ ಅಹ್ವಾನದ ಮೇಲೆ ಸಂದರ್ಶಕ ಸಂಶೋಧನಾ ವಿದ್ವಾಂಸರಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಜರುಗಿದ ಚರ್ಚೆ ಮತ್ತು ಸಮಾಲೋಚನೆಗಳ ಫಲಿತಾಂಶ ರೂಪದ ಶೈಕ್ಷಣಿಕ/ಸಂಶೋಧನಾ ಒಡಂಬಡಿಕೆಗೆ ಇಂದು ಜರುಗಿದ ಸರಳ ಸಮಾರಂಭದಲ್ಲಿ ಅಧಿಕೃತವಾಗಿ ಚಾಲನೆ ನೀಡಿ ಉದ್ಘಾಟಿಸಲಾಯಿತು.
ಬಳ್ಳಾರಿ: ಆಗಸ್ಟ್.14ರಂದು; ತಾಲೂಕಿನ ಕೊಳಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಕ್ರಾಣಿ ಕ್ಯಾಂಪ್ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಕೊಠಡಿಗಳನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು.
ಉನ್ನತ ಶಿಕ್ಷಣ ಪ್ರಮಾಣ ಶೇ 50 ಕ್ಕೆ ಏರಿಸುವ ಗುರಿ – ಬೆಂಗಳೂರು ವಿವಿ ರಿಜಿಸ್ಟ್ರಾರ್ ಡಾ. ಶ್ರೀನಿವಾಸ್
ಬಳ್ಳಾರಿ: “ಇಂದಿನ ಕ್ರಿಯಾತ್ಮಕ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ಕೃಷ್ಟಗೊಳಿಸಲು ಅಗತ್ಯವಾದ ಜ್ಞಾನ, ಕೌಶಲ್ಯ ಮತ್ತು ಮನಸ್ಥಿತಿಯೊಂದಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಅಸಾಧಾರಣ ಕಲಿಕೆಯ ಅನುಭವವನ್ನು ಒದಗಿಸಲು ಬದ್ಧವಾಗಿ, ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ ಮತ್ತು ಸಾಮಾಜಿಕ ಜವಾಬ್ದಾರಿಯ ಆಳವಾದ ಪ್ರಜ್ಞೆಯನ್ನು ಬೆಳೆಸುವ ಸಮಗ್ರ ಶೈಕ್ಷಣಿಕ ವಾತಾವರಣವನ್ನು ಪೋಷಿಸುವ ಗುರಿಯನ್ನು ಹೊಂದಿರುವ ತುಂಗಭದ್ರ ಎಜುಕೇಷನ್ ಹೆಲ್ತ್ & ರೂರಲ್ ಡೆವೆಲೊಪ್ಮೆಂಟ್ ಟ್ರಸ್ಟ್(ರಿ) ಸಂಸ್ಥೆಯ ಬಸವರಾಜೇಶ್ವರಿ ಸಮೂಹ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿ, 2023-24ನೇ ಶೈಕ್ಷಣಿಕ ವರ್ಷದಿಂದ ಕಿಷ್ಕಿಂದ ವಿಶ್ವವಿದ್ಯಾಲಯ ಪ್ರಾರಂಭಿಸುತ್ತಿರುವುದಾಗಿ” ಟ್ರಸ್ಟ್ನ ಅಧ್ಯಕ್ಷರಾದ ಡಾ. ಎಸ್.ಜೆ.ವಿ. ಮಹಿಪಾಲ್ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ವಿಶ್ವವಿದ್ಯಾಲಯದ ಅನುಮೋದನೆಗೆ ಕಾರಣರಾದ ಕರ್ನಾಟಕ ಘನ ಸರ್ಕಾರಕ್ಕೆ ಹೃತ್ಪೂರ್ವಕವಾದ ವಂದನೆಗಳನ್ನು ತಿಳಿಸಿದ್ದಾರೆ
ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸುವದರೊಂದಿಗೆ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶ ಹೆಚ್ಚಳಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.