kannadanwes

ರಾಗಿ ನೊಂದಣಿ ದಿಡೀರ್ ಸ್ಥಗಿತ ರೈತರ ಆಕ್ರೋಶ

ಹುಳಿಯಾರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುವ ಸಲುವಾಗಿ ಸರ್ಕಾರ ೨ ನೇ ಹಂತದ ನೊಂದಣಿ ಕಾರ್ಯ ಆರಂಭಿಸಿದ ೨೭ ಗಂಟೆಯೊಳಗೆ ಸ್ಥಗಿತಗೊಳಿಸಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.ಮೊದಲ ಹಂತದ ರಾಗಿ ಖರೀದಿ ಪ್ರಕ್ರಿಯೆ ಮುಗಿದು ರೈತರ ಖಾತೆಗಳಿಗೆ ಹಣ ವರ್ಗಾವಣೆಯಾದ ನಂತರ ೨ ನೇ ಹಂತದ ರಾಗಿ ಖರೀದಿಗಾಗಿ ನೊಂದಣಿ ಕಾರ್ಯಕ್ಕೆ ಸರ್ಕಾರ ಹಸಿರು ನಿಶಾನೆ ತೋರಿತ್ತು. ಆದರೆ ಏ.೨೫ ರಂದು ನೊಂದಣಿ ಕಾರ್ಯ ಆರಂಭಿಸುವುದಾಗಿ ಸರ್ಕಾರ ಘೋಷಿಸಿದ್ದರೂ ಸಹ ಏ.೨೬ ರ ಮಧ್ಯಾಹ್ನದವರೆವಿಗೂ ನೊಂದಣಿ ಕಾರ್ಯ ಆರಂಭವಾಗಲಿಲ್ಲ. …

ರಾಗಿ ನೊಂದಣಿ ದಿಡೀರ್ ಸ್ಥಗಿತ ರೈತರ ಆಕ್ರೋಶ Read More »

ಬರಗಾಲ, ಪ್ರವಾಹದ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಿ

ಬಳ್ಳಾರಿ; ಭಾಷೆ ಈಗ ಕೇವಲ ವ್ಯವಹಾರಕ್ಕೆ ಮಾತ್ರ ಸೀಮಿತಗೊಂಡಿರುವುರಿಂದ ಅದರ ಮೌಲ್ಯ ಕಡಿಮೆಯಾಗಿದೆ. ಅದಕ್ಕಾಗಿ ಭಾಷೆಯನ್ನು ಹೊಸ ಹೊಸ ತಂತ್ರಜ್ಞಾನದಿಂದ ವಿಶ್ವದಲ್ಲಿನ ಘಟನೆ, ಸಂಶೋದನೆಯನ್ನು ತಕ್ಷಣ ಕನ್ನಡ ಭಾಷೆಯಲ್ಲಿ ದೊರೆಯುಂತೆ ಆಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಅವರು‌ ಇಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ನಾಗರೀಕತೆ ಬೆಳವಣಿಗೆಯೇ ಸಂಸ್ಕೃತಿಯ ಬೆಳವಣಿಗೆ ಎಂಬುದನ್ನು ತಪ್ಪು ಎಂದು ಈ ವಿವಿ ಶೋಧನೆ ಮಾಡಬೇಕಿದೆ. ಚರಿತ್ರೆ ನಮ್ಮ‌ನಡೆ …

ಬರಗಾಲ, ಪ್ರವಾಹದ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಿ Read More »

ಈಶ್ವರಪ್ಪ ಬಂಧಿಸಲು ಒತ್ತಾಯಿಸಿ ಕಾಂಗ್ರೇಸ್ ಪ್ರತಿಭಟನೆ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ. ಈವರೆಗೆ ಅವರ ರಾಜೀನಾಮೆಗಾಗಿ ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡರು, ಇದೀಗ ಈಶ್ವರಪ್ಪ ಬಂಧನವಾಗುವ ತನಕ ಅಹೋರಾತ್ರಿ ಧರಣಿ ಮುಂದುವರೆಸುವುದಾಗಿ ಘೋಷಿಸಿದ್ದಾರೆ. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ ಕಾಂಗ್ರೆಸ್ಸಿಗರು ಪೊಲೀಸರಿಂದ ಬಂಧನಕ್ಕೆ ಒಳಗಾದರು. ಬಳಿಕ ವಿಧಾನಸೌಧ ಪೂರ್ವದ್ವಾರದಲ್ಲಿ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ …

ಈಶ್ವರಪ್ಪ ಬಂಧಿಸಲು ಒತ್ತಾಯಿಸಿ ಕಾಂಗ್ರೇಸ್ ಪ್ರತಿಭಟನೆ Read More »

ಸರ್ಕಾರದ ವತಿಯಿಂದ ಸಮಾನತಾ ದಿನಾಚರಣೆ

ಬೆಂಗಳೂರು : ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನವೆಂದು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು ಹೊಸ ಮನ್ವಂತರ : ಬಸವಣ್ಣನವರ ವೈಚಾರಿಕತೆ ತತ್ವ ಆದರ್ಶಗಳನ್ನು ಪುನ: ಬಿತ್ತುವಂಥ ಸಾಹಸಕ್ಕೆ ಕೈ ಹಾಕಿರುವ ಸೃಜನಶೀಲ ಚಿಂತಕರೂ ಆಗಿರುವ ಡಾ: ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚಾರಣೆಯನ್ನು ಸಮಾನತಾ ದಿನ ಎಂದು ಆಚರಿಸಲಾಗುತ್ತಿರುವುದು ಸೂಕ್ತ ವಾಗಿದೆ. ಬಸವಾದಿ ಶರಣರ ಮಾತುಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಸಭೆ ಸಮಾರಂಭಗಳಲ್ಲಿ ಕೇಳಿಬರುವ ಮಾತು. 12 ನೇ ಶತಮಾನದಲ್ಲಿ …

ಸರ್ಕಾರದ ವತಿಯಿಂದ ಸಮಾನತಾ ದಿನಾಚರಣೆ Read More »

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ದಿಲ್ಲಿ ಯಾತ್ರೆ ಯಶಸ್ವಿ

ಬೆಂಗಳೂರು : ರಾಜ್ಯದ ಕಾರ್ಮಿಕರಿಗೆ ಹೆಚ್ಚಿನ ಅನುಕೂಲ ಆಗುವಂತೆ ಕೇಂದ್ರದ ಸಹಕಾರ ಕೋರಿರುವ ಸಚಿವ ಶಿವರಾಂ ಹೆಬ್ಬಾರ್, ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರಕ್ಕೆ ಹಲವು ಪ್ರಸ್ತಾವನೆಗಳನ್ನು ಸಲ್ಲಿಸಿದ್ದು, ಈ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ. ಕಾರ್ಮಿಕ ಇಲಾಖೆ ಮತ್ತು ಸ್ವಜಿಲ್ಲೆಯ ಅಭಿವೃದ್ಧಿಗೆ ಸಂಬoಧಿಸಿದoತೆ ದಿಲ್ಲಿ ಪ್ರವಾಸ ಕೈಗೊಂಡಿದ್ದ ಸಚಿವರ ನೇತೃತ್ವದ ನಿಯೋಗವು ಸರತಿಯಂತೆ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ಅಭಿವೃದ್ಧಿ ಪರವಾದ ಚರ್ಚೆ- ಸಮಾಲೋಚನೆಗಳನ್ನು ನಡೆಸಿ ಕೇಂದ್ರದ ಅಗತ್ಯ ಸಹಕಾರ ಕೋರಿದೆ. ಕೇಂದ್ರ ಕಾರ್ಮಿಕ …

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ದಿಲ್ಲಿ ಯಾತ್ರೆ ಯಶಸ್ವಿ Read More »

ಕೊಪ್ಪಳ 21ನೇ ವಾರ್ಡ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆಗ್ರಹ

ಕೊಪ್ಪಳ,: ನಗರಸಭೆ ಕೊಪ್ಪಳ ವ್ಯಾಪ್ತಿಯ 21ನೇ ವಾರ್ಡ್ ಕಳೆದೆರಡು ವರ್ಷಗಳಿಂದ ಹಾಳು ಕೊಂಪೆಯಂತಾಗಿದೆ. ವಾರ್ಡ್‌ನ ಚುನಾಯಿತ ಪ್ರತಿನಿಧಿ ಗುರುರಾಜ ಹಲಗೇರಿ ಅವರಿಗೆ ವಾರ್ಡ್‌ನ ಸಮಸ್ಯೆಗಳನ್ನು ಮನದಟ್ಟು ಮಾಡಿದಾಗ್ಯೂ ಯಾವುದೇ ಸೌಕರ್ಯಗಳು ಸಿಗುತ್ತಿಲ್ಲ. ಏನೇ ಸಮಸ್ಯೆ ಹೇಳಿದರೂ ವಾಟ್ಸಾಪ್‌ಗೆ ಕಳಿಸಿ ಎಂದು ಹೇಳುವ ಮೂಲಕ ವಾಟ್ಸಾಪ್ ಸದಸ್ಯ ಎಂಬ ಅನ್ವರ್ಥ ಪಡೆದಿದ್ದಾರೆಂದು ವಾರ್ಡ್‌ನ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ನಗರದ ಡಾ.ಸಿಂಪಿ ಲಿಂಗಣ್ಣ ರಸ್ತೆಯ ಶ್ರೀರಾಘವೇಂದ್ರ ಮೆಟಲ್ ಸ್ಟೋರ್ ಎದುರುಗಡೆ 21ನೇ ವಾರ್ಡ್‌ನ ಜಾಗೃತಿ ನಾಗರಿಕರ ಸಮಿತಿ ನೇತೃತ್ವದಲ್ಲಿ …

ಕೊಪ್ಪಳ 21ನೇ ವಾರ್ಡ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆಗ್ರಹ Read More »

ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ

ಕುಷ್ಟಗಿ ; ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಕುಷ್ಟಗಿ ಇನ್ನರ್ ವ್ಹೀಲ್ ಕ್ಲಬ್ ಇವರ ವತಿಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು. ನಂತರ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷ ಶಾರಾದಾ ಶೆಟ್ಟರ್ ಮಾತನಾಡಿ ಕುಷ್ಟಗಿ ಬಸ್ ನಿಲ್ದಾಣದಲ್ಲಿ ಬಸ್ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಕಾರಣ ಬೇಸಿಗೆ ಇರುವುದರಿಂದ ಪ್ರಯಾಣಿಕರ ಸಹಾಯಕ್ಕಾಗಿ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಮಾಡಲಾಗಿದೆ ಎಂದರು. ಈ‌ ಸಂದರ್ಭದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಕಾರ್ಯಧರ್ಶಿ ಲಲಿತಾ, ವಂದನಾ ಗೋಗಿ, ಸರೋಜಾ …

ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ Read More »

ದೆಹಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ, ಏಪ್ರಿಲ್ 07: ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ , ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಭಾ.ಜ.ಪ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು. ಏಪ್ರಿಲ್ 16 ಮತ್ತು 17 ಭಾ.ಜ.ಪ ರಾಜ್ಯ ಕಾರ್ಯಕಾರಿಣಿ ಸಭೆ : ಏಪ್ರಿಲ್ 16 ಮತ್ತು 17 ರಂದು …

ದೆಹಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read More »

ಬಿಜೆಪಿಯಿಂದ ಜನಸಾಮಾನ್ಯರಿಗೆ 1,25,407.20 ಕೋಟಿ ಹೊರೆಯೇ ಉಡುಗೊರೆ

ಬೆಂಗಳೂರು : ಬಿಜೆಪಿ ಸರ್ಕಾರ ಚುನಾವಣೆಯ ಗೆಲುವು ಲೂಟಿಗೆ ಸಿಕ್ಕ ಪರವಾನಿಗೆ ಎಂದು ಭಾವಿಸಿದೆ. ಏಪ್ರಿಲ್ 1ರಿಂದ ಕೇಂದ್ರದ ಮೋದಿ ಸರ್ಕಾರದ ಬೆಲೆ ಏರಿಕೆಯ ನಿರ್ಧಾರದಿಂದ ಎಲ್ಲ ಜನಸಾಮಾನ್ಯರ ನಿತ್ಯ ಬದುಕಿನ ಬಜೆಟ್ ಮೇಲೆ ಗದಾಪ್ರಹಾರ ಮಾಡಿದೆ. ಪ್ರತಿಯೊಬ್ಬರಿಗೂ ‘ದುಬಾರಿ’ಯಲ್ಲಿ ಬದುಕುವುದು ದೊಡ್ಡ ಸವಾಲಾಗಿದೆ. ದುಬಾರಿ’ಯಿಂದ ಪ್ರತಿಯೊಂದು ಮನೆಯಲ್ಲಿ ಬದುಕು ದುಸ್ತರವಾಗಿದೆ ‘ದುಬಾರಿ’ಯು ಪ್ರತಿಯೊಬ್ಬರ ಜೀವನವನ್ನು ಕಮರಿಸುತ್ತಿದೆ. ಆದರೆ ಬಿಜೆಪಿಯು ಹಾಗೂ ಮೋದಿ ಸರ್ಕಾರವು ನಿತ್ಯವೂ ‘ದುಬಾರಿ’ಯನ್ನು ಸಂಭ್ರಮಿಸುವ ಮೂಲಕ ಜನರ ಜೀವನವನ್ನು ಅಣಕ ಮಾಡುತ್ತಿದೆ. ಕಾರಣ, …

ಬಿಜೆಪಿಯಿಂದ ಜನಸಾಮಾನ್ಯರಿಗೆ 1,25,407.20 ಕೋಟಿ ಹೊರೆಯೇ ಉಡುಗೊರೆ Read More »

ಗೊರುಚ ಸೇರಿದಂತೆ 3 ಸಾಧಕರಿಗೆ ಕನ್ನಡ ವಿವಿಯ ನಾಡೋಜ ಗೌರವ ಪದವಿ

ಹೊಸಪೇಟೆ : ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರತಿ ವರ್ಷ ನೀಡುವ ನಾಡೋಜ ಗೌರವ ಪದವಿಗೆ ಈ ವರ್ಷ ಜಾನಪದ ಸಾಹಿತಿ ಗೊ.ರು.ಚನ್ನಬಸಪ್ಪ, ಭಾಷಾ ಜ್ಞಾನಿ ಡಾ.ಭಾಷ್ಯಂ ಸ್ವಾಮಿ, ಹಾಗೂ ಸಂಸ್ಕೃತ ಲೋಕದ ಜ್ಞಾನಿ ಪ್ರೋ ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ತಿಂಗಳ 12 ರಂದು ನಡೆಯುವ ವಿವಿಯ 30 ನೇ ಘಟಿಕೋತ್ಸವ ನುಡಿಹಬ್ಬದಲ್ಲಿ ಈ ಗೌರವ ಪದವಿ ಪ್ರದಾನ ಮಾಡಲಿದೆ ಎಂದು ವಿವಿಯ ಕುಲಪತಿ ಡಾ.ಸ.ಚಿ.ರಮೇಶ ತಿಳಿಸಿದ್ದಾರೆ. ಇಂದು ವಿವಿಯಲ್ಲಿ ಸುದ್ದಿಗೋಷ್ಟಿ ನಡೆಸಿದ …

ಗೊರುಚ ಸೇರಿದಂತೆ 3 ಸಾಧಕರಿಗೆ ಕನ್ನಡ ವಿವಿಯ ನಾಡೋಜ ಗೌರವ ಪದವಿ Read More »

Translate »
Scroll to Top