Karnataka

ಚಾರಿತ್ರಿಕ ಉದ್ಯೋಗ ಮೇಳ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು.

ನಮ್ಮ ಸರ್ಕಾರವು ಇಡೀ ದೇಶಕ್ಕೆ “ಕರ್ನಾಟಕ ಮಾದರಿ” ಪರಿಚಯಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ನಮ್ಮ ಸರ್ಕಾರ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಯನ್ನು ಪರಿಚಯಿಸಿದೆ. ಬಸವಣ್ಮನವರ ನುಡಿದಂತೆ ನಡೆಯಬೇಕು ಎನ್ನುವ ತತ್ವದಂತೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹೈದ್ರಾಬಾದ್‌ ನಲ್ಲಿ ಮಾರ್ಚ್‌ 4 ರಿಂದ 6 ರ ವರೆಗೆ 50 ನೇ ಡೈರಿ ಇಂಡಸ್ಟ್ರಿ ಸಮ್ಮೇಳನ:  ತೆಲಂಗಾಣ ಮುಖ್ಯಮಂತ್ರಿ ರೇವಂತೆ ರೆಡ್ಡಿ ಅವರಿಗೆ ಆಹ್ವಾನ

ಬೆಂಗಳೂರು : ಹೈದ್ರಾಬಾದ್ ನ ಹೈಟೆಕ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ಮಾರ್ಚ್ 4 ರಿಂದ 6 ರ ವರೆಗೆ 50 ನೇ ಡೈರಿ ಇಂಡಸ್ಟ್ರಿ ಸಮ್ಮೇಳನ ನಡೆಯಲಿದ್ದು, ಡೈರಿ ವಲಯದಲ್ಲಿ ಇದು ಐತಿಹಾಸಿಕ ಸಮಾರಂಭವಾಗಿದೆ. ಈ ಮಹತ್ವದ ಸಮ್ಮೇಳನ ಉದ್ಘಾಟಿಸುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ವಿಧ್ಯುಕ್ತವಾಗಿ ಆಹ್ವಾನ ನೀಡಲಾಗಿದೆ.

ನಾಳೆ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ನಾಳೆ (ಜನವರಿ 29) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸೂಚಿಸಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಹನುಮಧ್ವಜವನ್ನು ಕೆಳಕ್ಕಿಳಿಸಿ ಹರಿದಿರುವುದನ್ನು ಖಂಡಿಸಲಾಗುವುದು. ರಾಷ್ಟ್ರಧ್ವಜವನ್ನು ಮಧ್ಯಾಹ್ನ 3 ಗಂಟೆಗೆ ಹಾರಿಸುವ …

ನಾಳೆ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ Read More »

ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟ್ರ ಭಾರತ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಭಾರತವು ಸಮಾಜವಾದ ತತ್ವ, ಪ್ರಜಾಪ್ರಭುತ್ವ, ಗಣರಾಜ್ಯದ ಮತ್ತು ಜಾತ್ಯತೀತ ತತ್ವದ ಸಾರ್ವಭೌಮತ್ವನ್ನು ಆಳವಡಿಸಿಕೊಂಡಿದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಅನೇಕ ಭಾಷೆಗಳನ್ನು ಮಾತನಾಡುವ ಜನ ಹಾಗೂ ವಿವಿಧ ಸಾಂಸ್ಕøತಿಕ ಹಿನ್ನಲೆಯನ್ನು ಹೊಂದಿರುವುದು ವೈಶಿಷ್ಟಮಯವಾಗಿದೆ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.

ಭಾರತ ಚುನಾವಣಾ ಆಯೋಗದಿಂದ ಕರ್ನಾಟಕ ರಾಜ್ಯಕ್ಕೆ ಎರಡು ಪ್ರತಿಷ್ಠಿತ ಪ್ರಶಸ್ತಿ ಘೋಷಣೆ

ಬೆಂಗಳೂರು : ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ನಮ್ಮ ರಾಜ್ಯದ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.

ಕರ್ನಾಟಕ ಮತ್ತು ಕೇರಳದ ಗ್ರಾಮೀಣ ಜನರಿಗೆ ವಿಮೆ ಸೌಲಭ್ಯ

ಬೆಂಗಳೂರು : ಭಾರತದ ಅತ್ಯಂತ ವಿಶ್ವಾಸಾರ್ಹ ಜೀವ ವಿಮೆ ಕಂಪನಿಗಳಲ್ಲಿ ಒಂದಾಗಿರುವ ಎಸ್ಬಿಐ ಲೈಫ್ ಇನ್ಶುರನ್ಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜೊತೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ.

ಕಾಂಗ್ರೆಸ್‌ ಸರ್ಕಾರದ ನಡೆ 5ನೇ ಗ್ಯಾರಂಟಿ ಯುವ ನಿಧಿ ಅನುಷ್ಠಾನದ ಕಡೆಗೆ: ರಣದೀಪ್‌ ಸಿಂಗ್‌ ಸುರ್ಜೇವಾಲ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಹಾ ಜನತೆಗೆ 5 ಗ್ಯಾರಂಟಿಗಳನ್ನು ಪ್ರಣಾಳಿಕೆ ಮುಖಾಂತರ ನೀಡಿತ್ತು.ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿ ವಾಗ್ದಾನಕ್ಕೆ ಮಹಾಜನತೆಯು ವಿಶ್ವಾಸವಿಟ್ಟು ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಕಾಂಗ್ರೆಸ್ಗೆ ನೀಡಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತಂದಿದ್ದರಿಂದ ನಮ್ಮ ಸರ್ಕಾರದ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲ ತಿಳಿಸಿದ್ದಾರೆ.

ನನ್ನ ರಾಜಕೀಯ ಜೀವನ ಪ್ರವೇಶಕ್ಕೆ ಪ್ರೊ. ನಂಜುಂಡಸ್ವಾಮಿಯವರೇ ಕಾರಣ

ಬೆಂಗಳೂರು : ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Translate »
Scroll to Top