ministers

ಇಂದು ಬೆಳಿಗ್ಗೆ 11.45 ಕ್ಕೆ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು/ಬಳ್ಳಾರಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಗಿದಿದ್ದು, ಇಂದು ಬೆಳಿಗ್ಗೆ 11.45 ಕ್ಕೆ 24 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಮೂಲಕ 34 ಸದಸ್ಯರು ಪೂರ್ಣ ಪ್ರಮಾಣದ ಸಂಪುಟ ಅಸ್ಥಿತ್ವಕ್ಕೆ ಬರಲಿದೆ. ರಾಜಭವನಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ರವಾನಿಸಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗಾಜಿನ ಮನೆಯಲ್ಲಿ ವೇದಿಕೆ ಸಜ್ಜುಗೊಂಡಿದೆ. ವರಿಷ್ಠರ ಸಮ್ಮತಿ ಪಡೆದು ಅಂತಿಮ ಪಟ್ಟಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಆಗಮಿಸಿದ್ದು, ಈಗಾಗಲೇ ಸಚಿವರಾಗಿ ಆಯ್ಕೆ ಮಾಡಲಾದ ಎಲ್ಲಾರನ್ನು …

ಇಂದು ಬೆಳಿಗ್ಗೆ 11.45 ಕ್ಕೆ ಪ್ರಮಾಣ ವಚನ ಸ್ವೀಕಾರ Read More »

ಸಚಿವ ಸಂಪುಟದಲ್ಲಿ ಪ್ರಾದೇಶಿಕ ನ್ಯಾಯ-ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಒಟ್ಟು ಏಳು ಸಚಿವ ಸ್ಥಾನ ನೀಡಲಾಗಿದ್ದು ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಬಣಜಿಗರಲ್ಲಿ ಈಶ್ವರ್ ಖಂಡ್ರೆ, ಪಂಚಮಸಾಲಿಗಳಲ್ಲಿ ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಕುರು ಒಕ್ಕಲಿಗರಲ್ಲಿ ಎಂ.ಬಿ.ಪಾಟೀಲ್, ಸಾದ ಲಿಂಗಾಯತರಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್, ಆದಿ ಬಣಜಿಗರಲ್ಲಿ …

ಸಚಿವ ಸಂಪುಟದಲ್ಲಿ ಪ್ರಾದೇಶಿಕ ನ್ಯಾಯ-ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ

ಬೆಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ ಮಾಡಲು ತೀರ್ಮಾನಿಸಿದ್ದೆವೆ. ಈ ಹಿನ್ನೆಲೆಯಲ್ಲಿ ಇದೇ 18ರಂದು ಬೆಳಗ್ಗೆ 10.30ಕ್ಕೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಮಾಡಲಿದ್ದೇವೆ. ಈ ಸಭೆಯಲ್ಲಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಡಾ.ಜಿ. ಪರಮೇಶ್ವರ್, ಕೆ.ಹೆಚ್ ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಧೃವನಾರಾಯಣ, ಸಂಸದರಾದ ಎಲ್ ಹನುಮಂತಯ್ಯ, ಪ್ರಿಯಾಂಕ್ …

ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ Read More »

ಎಐಸಿಸಿಯ ನವ ಸಂಕಲ್ಪ ಶಿಬಿರ

ಬೆಂಗಳೂರು : ಎಐಸಿಸಿಯ ನವ ಸಂಕಲ್ಪ ಶಿಬಿರದಲ್ಲಿ ಭಾಗವಹಿಸಲು ಉದಯಪುರಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗಳಾದ ಸುಶಿಲ್ ಕುಮಾರ್ ಶಿಂಧೆ, ವೀರಪ್ಪ ಮೊಯಿಲಿ, ಕೇಂದ್ರದ ಮಾಜಿ ಸಚಿವರಾದ ಮಾರ್ಗರೆಟ್ ಆಳ್ಚ ಅವರೊಂದಿಗೆ ಮಾತುಕತೆ ನಡೆಸಿದರು.‌ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ಕೃಷ್ಣ ಬೈರೇಗೌಡ ಹಾಜರಿದ್ದರು. ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕರಾದ ಬೈರತಿ ಸುರೇಶ್, ರಾಘವೇಂದ್ರ ಹಿಟ್ನಾಳ್, ಭೀಮಾ ನಾಯಕ, ಮಾಜಿ ಶಾಸಕರಾದ ತರೀಕೆರೆ …

ಎಐಸಿಸಿಯ ನವ ಸಂಕಲ್ಪ ಶಿಬಿರ Read More »

40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ

ಬೆಂಗಳೂರು : ನಿನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವನ್ನು ಹೊಗಳಿದ್ದಾರೆ. ಅರುಣ್ ಸಿಂಗ್ ಅವರು ಬೊಮ್ಮಾಯಿ ಅವರನ್ನು ಜನಸಾಮಾನ್ಯರ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಇದರರ್ಥ ಈ 40% ಕಮಿಷನ್ ಸರ್ಕಾರದ ಭ್ರಷ್ಟಾಚಾರಕ್ಕೆ ಅಮಿತ್ ಶಾ ಮತ್ತು ಅರುಣ್ ಸಿಂಗ್ ಅವರು ಅಧಿಕೃತ ಒಪ್ಪಿಗೆಯ ಮುದ್ರೆ ಒತ್ತಿದ್ದಾರೆ. ಇದು 40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ. ಸರ್ಕಾರಿ ಕಾಮಗಾರಿಗಳಿಗೆ 40% …

40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ Read More »

ಉತ್ತಮ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಪ್ರಮುಖ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು

ಬಳ್ಳಾರಿ: ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಪ್ರಮುಖವಾಗಿದ್ದು, ಪ್ರಕರಣಗಳನ್ನು ಬಗೆಹರಿಸುವುದರಲ್ಲಿ ಮತ್ತು ಮಾನವೀಯತೆಯಲ್ಲಿ ಕರ್ನಾಟಕ ಪೊಲೀಸ್ ರಾಷ್ಟ್ರದಲ್ಲೇ ಉತ್ತಮ ಪೊಲೀಸ್ ಪಡೆಯಾಗಿದೆ; ಇದು ನಮ್ಮ ಹೆಮ್ಮೆ ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು.ಜಿಲ್ಲೆಯ ಸಿರುಗುಪ್ಪ ಪಟ್ಟಣದ ಎಪಿಎಂಸಿ ಆವರಣದಲ್ಲಿ ಪೊಲೀಸ್ ಉಪ-ಅಧೀಕ್ಷಕರ ಕಚೇರಿಯನ್ನು ಗುರುವಾರದಂದು ಉದ್ಘಾಟಿಸಿ ಅವರು ಮಾತನಾಡಿದರು.ಉತ್ತಮ ಸಮಾಜ ನಿರ್ಮಾಣದಲ್ಲಿ ಪೊಲೀಸರು ದೊಡ್ಡ ಜವಾಬ್ದಾರಿ ನಿಭಾಯಿಸುತ್ತಿದ್ದು,ನೂತನ ಪೊಲೀಸ್ ಕಛೇರಿ ಉದ್ಘಾಟನೆಯೊಂದಿಗೆ …

ಉತ್ತಮ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಪ್ರಮುಖ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು Read More »

ಪಿಎಸ್ ಐ ನೇಮಕಾತಿ ಅಕ್ರಮವು ಮೂರು ಹಂತಗಳಲ್ಲಿ ನಡೆದಿದೆ

ಬೆಂಗಳೂರು : ವಿಧಾನಸೌಧದಲ್ಲಿ ಮಾಡಲಾದ ಧರಣಿಯ ಕಡೆಯ ದಿನ ಮಾಜಿ ಶಾಸಕ ಪ್ರಿಯಾಂಕ್ ಖರ್ಗೆ ಅವರು ಹಾಗೂ ನಾನು ಪತ್ರಿಕಾಗೋಷ್ಠಿ ನಡೆಸಿ ಪಿಎಸ್ ಐ ನೇಮಕದಲ್ಲಿ ಅಖ್ರಮ ನಡೆದಿರುವ ವಿಚಾರವನ್ನು ಪ್ರಸ್ತಾಪ ಮಾಡಿದ್ದೆವು. ಪಿಎಸ್ ಐ ನೇಮಕಾತಿ ಅಕ್ರಮವು ಮೂರು ಹಂತಗಳಲ್ಲಿ ನಡೆದಿದ್ದು, ಮೊದಲು ಪ್ರಶ್ನೆ ಪತ್ರಿಕೆ ಕೊಡುವಾಗ ವ್ಯವಸ್ಥಿತವಾಗಿ ತಮಗೆ ಬೇಕಾದ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಕೊಟ್ಟು ಗೊತ್ತಿರುವುದು ಬರೆದು ಉಳಿದಿದ್ದನ್ನು ಖಾಲಿ ಬಿಡಿ ಎಂದು ಹೇಳಿರುತ್ತಾರೆ. ಎರಡನೇ ಹಂತದಲ್ಲಿ ತಮಗೆ ಬೇಕಾದವರಿಗೆ ಪ್ರಶ್ನೆ ಪತ್ರಿಕೆಯಲ್ಲಿ …

ಪಿಎಸ್ ಐ ನೇಮಕಾತಿ ಅಕ್ರಮವು ಮೂರು ಹಂತಗಳಲ್ಲಿ ನಡೆದಿದೆ Read More »

ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ- ಎಂ.ಜಿ.ಮಹೇಶ್

ಬೆಂಗಳೂರು: ರಾಜ್ಯದಲ್ಲಿ ಕೇವಲ ನಕಾರಾತ್ಮಕ ಧೋರಣೆಯನ್ನು ಆಚರಿಸುವ ವಿರೋಧ ಪಕ್ಷವಾದ ಕಾಂಗ್ರೆಸ್ ಬಗ್ಗೆ ಒಂದು ಖಂಡನಾ ನಿರ್ಣಯವನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಅಧಿವೇಶನದಲ್ಲಿ ಮಂಡಿಸಿದರು. ಈ ನಿರ್ಣಯವನ್ನು ಲಕ್ಷ್ಮಣ್ ಸವದಿ ಮತ್ತು ಅಪ್ಪಚ್ಚು ರಂಜನ್ ಅವರು ಅನುಮೋದಿಸಿದರು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ.ಮಹೇಶ್ ಅವರು ತಿಳಿಸಿದರು. ಹೊಸಪೇಟೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರಕಾರವು ಇಷ್ಟೆಲ್ಲ ಪ್ರಗತಿಗಳನ್ನು ಮಾಡಿದರೂ ಹಾಗೂ ಜನೋಪಯೋಗಿ ಕೆಲಸಗಳನ್ನು ಮಾಡಿದರೂ …

ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ- ಎಂ.ಜಿ.ಮಹೇಶ್ Read More »

ಐಟಿ, ಬಿಟಿ ಸಚಿವರನ್ನು ಭೇಟಿಯಾದ ಕಂಪನಿಯ ಉನ್ನತ ನಿಯೋಗ

ಬೆಂಗಳೂರು: ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ತಾನು ಗಳಿಸಿರುವ ಪರಿಣತಿಯನ್ನು ಕರ್ನಾಟಕ ಸರಕಾರದೊಂದಿಗೆ ಹಂಚಿಕೊಳ್ಳಲು ಸಿದ್ಧವಿದ್ದು, ಸೈಬರ್ ಭದ್ರತಾ ನೀತಿಯನ್ನು ರೂಪಿಸಲು ಅಗತ್ಯ ನೆರವು ನೀಡಲು ಮುಕ್ತ ಮನಸ್ಸು ಹೊಂದಿರುವುದಾಗಿ ಪ್ರತಿಷ್ಠಿತ ಐಬಿಎಂ ಕಂಪನಿ ಹೇಳಿದೆ. ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಮಂಗಳವಾರ ವಿಕಾಸ ಸೌಧದಲ್ಲಿ ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚಿಸಿದ ಮೂವರುಸದಸ್ಯರ ಐಬಿಎಂ ನಿಯೋಗವು ಈ ಭರವಸೆ ನೀಡಿದೆ. ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸರಕಾರವು ಅಗತ್ಯ …

ಐಟಿ, ಬಿಟಿ ಸಚಿವರನ್ನು ಭೇಟಿಯಾದ ಕಂಪನಿಯ ಉನ್ನತ ನಿಯೋಗ Read More »

ಬಾಲಕನ ಮೇಲೆ ದೌರ್ಜನ್ಯ ಪ್ರಕರಣ, ಒಬ್ಬ ಆರೋಪಿಯ ಬಂಧನ

ಬೆಂಗಳೂರು, ಮಾರ್ಚ್ 25 ಬಸವನ ಬಾಗೇವಾಡಿ ತಾಲೂಕಿನಲ್ಲಿ, ಏಳು ವರ್ಷದ ಬಾಲಕನ ಮೇಲೆ ನಡೆದ ಅಮಾನುಷ, ದೌರ್ಜನ್ಯ ಘಟನೆಯ ಸಂಬಂಧ, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಪರಿಷತ್ ಗೆ, ತಿಳಿಸಿದ್ದಾರೆ. ಸದನದ, ಶೂನ್ಯ ವೇಳೆಯಲ್ಲಿ, ಕಾಂಗ್ರೆಸ್ ಸದಸ್ಯ ಶ್ರೀ ಪ್ರಕಾಶ್ ರಾಥೋಡ್, ಅವರಿಗೆ ಉತ್ತರಿಸಿದ ಸಚಿವರು, ಸಾಮಾಜಿಕ ಜಾಲ ತಾಣ ದಲ್ಲಿ ಈ ಘಟನೆ ಕುರಿತು ಪ್ರಕಟವಾಗಿದೆ, ಹಾಗೂ ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ, …

ಬಾಲಕನ ಮೇಲೆ ದೌರ್ಜನ್ಯ ಪ್ರಕರಣ, ಒಬ್ಬ ಆರೋಪಿಯ ಬಂಧನ Read More »

Translate »
Scroll to Top