ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ನೀಡಲು ಆಗ್ರಹ
ಬಳ್ಳಾರಿ: ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ಸೇರಿದದಂತೆ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಶೌಚಾಲಯಗಳು ಇಲ್ಲ ಹಾಗೂ ಸುಮಾರು 250ಕ್ಕೂ ಹೆಚ್ಚು ಬಡ ಕುಟುಂಬಗಳು ನಿವೇಶನ ಮತ್ತು ವಸತಿ ಇಲ್ಲದೆ ಲಭ್ಯವಿರುವ ಚಿಕ್ಕಗುಡಿಸಲಲ್ಲಿ ಮೂರು ನಾಲ್ಕು ಕುಟುಂಬಗಳು ಒತ್ತಡದ ಸಂಕಷ್ಟದಲ್ಲಿ ವಾಸಿಸುತ್ತಿದ್ದು, ಮೂಲಭೂತ ಸೌಲಭ್ಯಗಳು ಮರೆ ಮಾಚಿವೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಪೆಡರೇಷನ್ ನ ಜಿಲ್ಲಾ ಅಧ್ಯಕ್ಷ ಯು.ಎರ್ರಿಸ್ವಾಮಿ ಅವರು ಹೇಳಿದರು.