political

ಘೋಷಿಸಿದ ಎಲ್ಲಾ ಯೋಜನೆಗಳು ಜಾರಿ

ಬೆಂಗಳೂರು: ರಾಜ್ಯಾದ್ಯಂತ ಎಲ್ಲರಿಗೂ 200 ಯೂನಿಟ್ ವರೆಗೆ ಉಚಿತ ವಿದ್ಯುತ್,ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ,ಕುಟುಂಬದ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡುವುದು,ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ತಲಾ ಹತ್ತು ಕೆಜಿ ಅಕ್ಕಿ ಸೇರಿದಂತೆ ಚುನಾವಣೆಗೂ ಮುನ್ನ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು,ಆ ಮೂಲಕ ಇಡೀ ದೇಶವೇ ನಿಬ್ಬೆರಗಾಗುವಂತೆ ಮಾಡಿದೆ.

ಗ್ಯಾರೆಂಟಿಗಳ ಜಾರಿ ಹಿನ್ನೆಲೆ ಇಂದು ಸಚಿವ ಸಂಪುಟ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಶುಭ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ತ್ರಿಮೂರ್ತಿಗಳ ವೈಫಲ್ಯವೇ ಕಾರಣ….!

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಘಪರಿವಾರದ ಹಿರಿಯ ನಾಯಕ ಸಂತೋಷ್ ಜೀ ಅವರ ವೈಫಲ್ಯವೇ ಮುಖ್ಯ ಕಾರಣ ಎಂದು ಕೇಂದ್ರ ಸಚಿವರೊಬ್ಬರು ಪ್ರಧಾನಿ ನರೇಂದ್ರಮೋದಿ ಅವರಿಗೆ ಸಮಗ್ರ ವರದಿ ನೀಡಿದ್ದಾರೆ.

ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಬಿಪಿ ಹರೀಶ್​ಗೆ ನಿರೀಕ್ಷಣಾ ಜಾಮೀನು ಮಂಜೂರು

ದಾವಣಗೆರೆ: ಜಾತಿ ನಿಂದನೆ ಪ್ರಕರಣ ಎದುರಿಸುತ್ತಿದ್ದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರಿಗೆ ದಾವಣಗೆರೆಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ವಸತಿ ಹಾಗೂ ವಕ್ಫ್ ಖಾತೆ ಸಿಕ್ಕಿರುವುದು ಖುಷಿ ತಂದಿದೆ: ಜಮೀರ್ ಅಹಮ್ಮದ್

ತುಮಕೂರು: ಮುಖ್ಯಮಂತ್ರಿ ನನಗೆ ನೀಡಿರುವ ಖಾತೆಯಲ್ಲಿ ಬಡವರ ಸೇವೆ ಮಾಡಲು ಅವಕಾಶ ಇದೆ. ಹಾಗಾಗಿ ಈ ಖಾತೆ ಸಿಕ್ಕಿರುವುದು ನನಗೆ ಖುಷಿ ತಂದಿದೆ ಎಂದು ನೂತನ ವಸತಿ ಹಾಗೂ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ತಿಳಿಸಿದರು.

ಸಾಧ್ಯವಾದಷ್ಟು ಬೇಗ 5 ಗ್ಯಾರೆಂಟಿಗಳು ಜಾರಿ: ಈಶ್ವರ ಖಂಡ್ರೆ

ತುಮಕೂರು: ಕಾಂಗ್ರೆಸ್ ಪಕ್ಷ ನೀಡಿರುವ ೫ ಗ್ಯಾರಂಟಿಗಳ ಜಾರಿಯಲ್ಲಿ ಯಾವುದೇ ಗೊಂದಲವಿಲ್ಲ. ತಕ್ಷಣವೇ ಜಾರಿ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ. ಆದಷ್ಟು ಬೇಗ ಭರವಸೆಗಳನ್ನು ಈಡೇರಿರಲಿವೆ ಎಂದು ನೂತನ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಇಂದಿಲ್ಲಿ ತಿಳಿಸಿದರು.

ರಾಜೀನಾಮೆ ಕೇವಲ್ ವಾಟ್ಸಪ್ ಯೂನಿವರ್ಸಿಟಿ ಸೃಷ್ಟಿ 

ಬೆಂಗಳೂರು: “ನಾನು ಬಾಡಿಗೆ ಮನೆಯಿಂದ ಬಂದವನಲ್ಲ ನಾನು, ಸ್ವಂತ ಮನೆಯಲ್ಲಿ ಇರುವವ. ರಾಜೀನಾಮೆ ಕೇವಲ್ ವಾಟ್ಸಪ್ ಯೂನಿವರ್ಸಿಟಿ ಸೃಷ್ಟಿ ಎಂದು ಹಿರಿಯ ಮುಖಂಡ, ಮೇಲ್ಮನೆ ಸದಸ್ಯ ಬಿಕೆ ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೇಲ್ಮನೆಯಲ್ಲಿ ವಿಪಕ್ಷ ನಾಯಕರು,  ಸಭಾನಾಯಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಪ್ರದಾಯವಿತ್ತು.  ಆದರೆ ಈ ಬಾರಿ ಸಂಪ್ರದಾಯ ಮುರಿದಿದ್ದಾರೆ.  ಸಚಿವ ಸ್ಥಾನ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ನಾನೆಂದೂ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ ಎಂದರು. ವಿಧಾನಪರಿಷತ್ತಿನಲ್ಲಿ ಸಭಾನಾಯಕರನ್ನಾಗಿ ಯಾರನ್ನು ನೇಮಿಸಬೇಕು ಎಂಬ ಕುರಿತು  ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರನ್ನು ಕೇಳಿ. ಆದರೆ ತಾವು ಮೇಲ್ಮೆಗೆ ರಾಜೀನಾಮೆ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. ಅದೆಲ್ಲ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಬಂದಂತಹ ವಿಷಯ. …

ರಾಜೀನಾಮೆ ಕೇವಲ್ ವಾಟ್ಸಪ್ ಯೂನಿವರ್ಸಿಟಿ ಸೃಷ್ಟಿ  Read More »

ಪ್ರಮುಖ ನಾಯಕರಿಗೆ ಸಿಗದ ಮಂತ್ರಿ ಸ್ಥಾನ

ನಂಜುಂಡಪ್ಪ.ವಿ. ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್, ಆರ್.ವಿ. ದೇಶಪಾಂಡೆ, ಟಿ.ಬಿ. ಜಯಚಂದ್ರ ಮತ್ತಿತರ ಪ್ರಮುಖ ಹಿರಿಯ ನಾಯಕರಿಗೆ ಈ ಬಾರಿ ಸಚಿವ ಸ್ಥಾನ ದೊರೆತಿಲ್ಲ. ಕಳೆದ ಮೂರುವರೆ ದಶಕಗಳಿಂದ ಮುಟ್ಟಿದ್ದೆಲ್ಲವೂ ಚಿನ್ನ. ಪ್ರತಿ ಹಂತದಲ್ಲೂ ಗೆಲುವು ಸಾಧಿಸುತ್ತಿದ್ದ, ವರಿಷ್ಠರನ್ನು ಓಲೈಸಿ ಹೇಗಾದರೂ ಮಾಡಿ ಉನ್ನತ ಸ್ಥಾನಮಾನ ಪಡೆಯುತ್ತಿದ್ದ ನಾಯಕರಿಗೆ ಈ ಬಾರಿ ಹೈ ಕಮಾಂಡ್ ಚೆಳ್ಳೆ ಹಣ್ಣು ತಿನ್ನಿಸಿದೆ. ಬಿ.ಕೆ. ಹರಿಪ್ರಸಾದ್ ಯಾವತ್ತೂ ಸಚಿವರಾಗಲಿಲ್ಲ. ಯಾವುದೇ ಚುನಾವಣೆ ಗೆಲ್ಲಲಿಲ್ಲ.  ಆದರೆ ಕಾಂಗ್ರೆಸ್ ವರಿಷ್ಠರ …

ಪ್ರಮುಖ ನಾಯಕರಿಗೆ ಸಿಗದ ಮಂತ್ರಿ ಸ್ಥಾನ Read More »

ನೂತನ ಸಚಿವರಲ್ಲಿ ಯಾರಿಗೆ ಯಾವ ಖಾತೆ ಸಿಕ್ಕಿದೆ ನೋಡಿ..

ಬೆಂಗಳೂರು: ರಾಜಭವನದಲ್ಲಿಂದು 11;45 ಕ್ಕೆ ಆರಂಭವಾದ ಸಮಾರಂಭದಲ್ಲಿ ಇಪ್ಪತ್ನಾಲ್ಕು ಮಂದಿ ನೂತನ ಸಚಿವರಿಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಗೌಪ್ಯತಾ ಪ್ರತಿಜ್ಞಾ ವಿಧಿ ಭೋಧಿಸಿದರು.ಆ ಮೂಲಕ ಒಟ್ಟು 34 ಮಂದಿ ಸಚಿವರೊಂದಿಗೆ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿದಂತಾಗಿದ್ದು, ಇದೀಗ ಎಲ್ಲಾ ಸಚಿವರಿಗೂ ಖಾತೆ ಹಂಚಿಕೆ ಮಾಡಲಾಗಿದೆ. ಹಾಗಾದರೆ  ನೂತನ ಸಚಿವರಿಗೆ ಸಿಕ್ಕ ಖಾತೆ ಯಾವುದು ಒಮ್ಮೆ ನೋಡಿ ಬಿಡಿ

ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದ ಸಚಿವ ಸಂಪುಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಇಂದು ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಹಿರಿಯ ನಾಯಕರಾದ ಹೆಚ್.ಸಿ.ಮಹದೇವಪ್ಪ,ಕೆ,ವೆಂಕಟೇಶ್,ಚಲುವರಾಯಸ್ವಾಮಿ,ಪುಟ್ಟರಂಗಶೆಟ್ಟಿ ಸೇರಿದಂತೆ ಇಪ್ಪತ್ನಾಲ್ಕು ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿಂದು 11;45 ಕ್ಕೆ ಆರಂಭವಾದ ಸಮಾರಂಭದಲ್ಲಿ ಇಪ್ಪತ್ನಾಲ್ಕು ಮಂದಿ ನೂತನ ಸಚಿವರಿಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಗೌಪ್ಯತಾ ಪ್ರತಿಜ್ಞಾ ವಿಧಿ ಭೋಧಿಸಿದರು. ಸುಮಾರು ಎಂಭತ್ತೈದು ನಿಮಿಷಗಳ ಕಾಲ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥ್ಯಾವರ್ ಚಂದ್ ಗೆಹ್ಲೋಟ್,ಮುಖ್ಯಮಂತ್ರಿ ಸಿದ್ಧರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು ವೇದಿಕೆಯ …

ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದ ಸಚಿವ ಸಂಪುಟ Read More »

Translate »
Scroll to Top