ಅಧಿಕಾರಿಗಳು ಕಾಮಗಾರಿಗಳ ಪರಿಶೀಲನೆ ನಡೆಸುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ
ರಾಯಚೂರು: ಕೃಷಿ ಇಲಾಖೆ, ನೀರಾವರಿ ಇಲಾಖೆ ಮತ್ತು ಜೆಸ್ಕಾಂ ಇಲಾಖೆಗಳು ಸರಿಯಾದ ರೀತಿಯಲ್ಲಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವ ಹಿಸದಾಗ ಮಾತ್ರ ಜಿಲ್ಲೆಯಲ್ಲಿ ಕೃಷಿ ಚಟುವಟಿ ಕೆಗಳು ಉತ್ತಮವಾಗಿ ನಡೆಯಲಿವೆ ಆದ್ದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾಮಗಾರಿಗಳನ್ನು ಕಡ್ಡಾಯವಾಗಿ ಸ್ಥಳ ಪರಿಶೀಲನೆ ಮಾಡುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಸಣ್ಣ ನೀರವಾರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.