ಹೊಸಪೇಟೆ : ದೇವಸ್ಥಾನಕ್ಕೆ ಹೋಗಿ ಮನೆಗೆ ಬರುವಾಗ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿದ ಘಟನೆ ಹೊಸಪೇಟೆ ಹೊರ ವಲಯದ ವ್ಯಾಸನಕೇರಿ ಬಳಿ ನಡೆದಿದೆ.
ಹೊಸಪೇಟೆ ಉಕ್ಕಡ ಕೇರಿ ನಿವಾಸಿ ಗೋಣಿ ಬಸಪ್ಪ ಕುಟುಂಬದವರ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿ ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಅಪಘಾತ ನಡೆದಿದೆ.
ಎರಡು ಲಾರಿ ಮತ್ತು ಕ್ರೂಸರ್ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ ಘಟನೆಗೆ ಲಾರಿಯೊಂದರ ಎಕ್ಸಲ್ ಕಟ್ಟಾಗಿರೋದೇ ಕಾರಣ ಎನ್ನಲಾಗ್ತಿದೆ. ಸ್ಥಳದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟೊರೋದು ಒಂದೇಡೆಯಾದ್ರೇ ಮೃತ ದೇಹ ಹೊರ ತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
ಇನ್ನೂ ಮೃತರನ್ನು ಉಮಾ(45) ಕೆಂಚವ್ವ(80) ಭಾಗ್ಯ( 32), ಅನಿಲ್(30) , ಗೋಣಿಬಸಪ್ಪ(65), ಯುವರಾಜ(4) ಭೀಮಲಿಂಗ(50) ಎಂದು ಗುರುತಿಸಲಾಗಿದೆ.
ಸದ್ಯ ಗಂಭೀರವಾಗಿ ಗಾಯಗೊಂಡಿರೋ ಇಬ್ಬರನ್ನು ಸೇರಿದಂತೆ ಮೃತ ದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
Facebook
Twitter
LinkedIn
WhatsApp
Email
Print
Telegram