ಕಾಂಗ್ರೆಸ್ ನಾಯಕರ ಭ್ರಮೆಯ ಪೊರೆ ಕಳಚಿದೆ

ದೇವನಹಳ್ಳಿ,ಮಾ,10 : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಕರ್ನಾಟಕದಲ್ಲಿ ಚುನಾವಣೆ ಗೆದ್ದೇ ಬಿಟ್ಟೆವು ಎಂಬಂತೆ ವರ್ತಿಸುತ್ತಿದ್ದ ಕಾಂಗ್ರೆಸ್ ನಾಯಕರ ಭ್ರಮೆಯ ಪೊರೆ ಕಳಚಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಅವರ ದಕ್ಷ ಜೋಡಿ ಉತ್ತರಪ್ರದೇಶದಲ್ಲಿ ಪಕ್ಷವನ್ನು ಗೆಲುವಿನ ದಡಕ್ಕೆ ಸೇರಿಸಿದೆ. ದೇಶದ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶವೂ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಬಹುದೊಡ್ಡ ಉತ್ಸಾಹ ಮೂಡಿಸಿದೆ ಎಂದು ಹೇಳಿದರು.

ದೇಶ ಹಾಗೂ ರಾಜ್ಯದ ಮತದಾರ ಭಾರತೀಯ ಜನತಾ ಪಕ್ಷದ ಮೇಲೆ ಅಖಂಡ ವಿಶ್ವಾಸವನ್ನು ಇಟ್ಟಿದ್ದಾರೆ. ಭವಿಷ್ಯದ ಚುನಾವಣಾ ದೃಷ್ಟಿಯಿಂದ ಈ ಫಲಿತಾಂಶ ನಮ್ಮ ಕಾರ್ಯಕರ್ತರಲ್ಲಿ ಇನ್ನಷ್ಟು ಉತ್ಸಾಹ ಮೂಡಿಸಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ವಿಭಜನೆಯಾದರೂ ಆಶ್ಚರ್ಯವಿಲ್ಲ. ಪಂಚರಾಜ್ಯ ಫಲಿತಾಂಶ ಬಂದ ನಂತರ ಕಾಂಗ್ರೆಸ್ ನಾಯಕರು ಹತಾಶರಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಅವರ ಮರ್ಯಾದೆ ಬೀದಿಗೆ ಬರುತ್ತಿದೆ ಎಂದು ರಾಜ್ಯ ಕೋಶಾಧ್ಯಕ್ಷ ಎ.ಕೆ.ಪಿ.ನಾಗೇಶ್ ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುಂದರೇಶ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಮಾಜಿ ಶಾಸಕ ಚಂದ್ರಣ್ಣ, ಬಯಪ್ಪ ಮಾಜಿ ಅಧ್ಯಕ್ಷ ಅಶ್ವಥ್ ನಾರಾಯಣ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ರವಿಕುಮಾರ್ ಟೌನ್ ಅಧ್ಯಕ್ಷ ಸಂದೀಪ್, ಮುಖಂಡರಾದ ದೇ.ಸು.ನಾಗರಾಜ್, ಸಾವಕನಹಳ್ಳಿ ನಾಗೇಶ್, ರಾಮಕೃಷ್ಣ ಹೆಗ್ಗಡೆ, ಸಾರಿಕಾ, ನಾಗವೇಣಿ, ಪುನೀತ, ಲಕ್ಷ್ಮೀ, ದ್ರಾಕ್ಷಾಯಿಣಿ, ಮತ್ತಿತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top