ಬೈಕ್, ಕಾರು ಅಪಘಾತ ಎರಡು ಸಾವು – ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ಘಟನೆ

ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿದ್ಯಾಲಯದ ಬಿಗೇಟ್ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದರು ಎಂದು ತಿಳಿದುಬಂದಿದೆ. 

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದವರಾದ ಆಂಜನೇಯ ( 53), ಹನುಮೇಶ್( 18) ಮೃತ ದುರ್ದೈವಿಗಳು ತಿಳಿದುಬಂದಿದೆ. ಕಮಲಾಪುರದಿಂದ ಪಾಪಿನಾಯಕನ ಹಳ್ಳಿಯ ಕಡೆ ಬೈಕ್ ಸವಾರರು ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು, ಗುದ್ದಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top