ಎಲೆರಾಂಪುರ ಶ್ರೀ ಮಠಕ್ಕೆ ಭೇಟಿ, ಶ್ರೀಗಳ ಆಶೀರ್ವಾದ ಪಡೆದ ಕೇಂದ್ರ ಸಚಿವ ವಿ ಸೋಮಣ್ಣ

ಬೆಂಗಳೂರು: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ತುಮಕೂರು ಜಿಲ್ಲೆಗೆ ಆಗಮಿಸಿದ ಜಲ ಶಕ್ತಿ ಮತ್ತು ರೈಲ್ವೆ ಸಚಿವ ವಿ ಸೋಮಣ್ಣ.

ಇಂದು ಬೆಳಗ್ಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಸಿ ಇ ಓ ಪ್ರಭು ಜಿ ಗೆ ವಿ ಸೋಮಣ್ಣ ತರಾಟೆ.

ನಂತರ ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು.

ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ ಪ್ರಾರಂಭದ ಬಗ್ಗೆ ಕೇವಲ 15 ದಿನದಲ್ಲಿ ಸವಿಸ್ತಾರವಾಗಿ ತಿಳಿಸುತ್ತೇನೆ ಎಂದರು.

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ  ನಮಗೆ ಅತಿ ಹೆಚ್ಚು ಲೀಡ್ ಕೊಟ್ಟ ಮತದಾರ ಪ್ರಭುಗಳಿಗೆ ಕೃತಜ್ಞತೆ ಸಲ್ಲಿಸಿದರು..

ಇನ್ನು ಎರಡು ದಿನಗಳ ಕಾಲ ಕ್ಷೇತ್ರದಲ್ಲಿ ಪ್ರವಾಸ ಮಾಡಿ ನಂತರ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಆದೇಶದಂತೆ ದೂರ ದೃಷ್ಟಿಯನ್ನು ಇಟ್ಟುಕೊಂಡು ಕ್ಷೇತ್ರದ ಅಭಿವೃದ್ಧಿಯತ್ತ ಚರ್ಚೆ ಮಾಡುತ್ತೇನೆ.

ಈ ಭಾಗದ ಸಮಗ್ರ ಅಭಿವೃದ್ಧಿಯ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ನೆಚ್ಚಿನ ನಾಯಕನ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಅಭಿಮಾನಿಗಳು.

 

ನೂತನ ಕೇಂದ್ರ ಸಚಿವರಿಗೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿ ಶುಭ ಹಾರೈಸಿ ಸನ್ಮಾನಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top