ವಾಲ್ಮೀಕಿ ಹಗರಣ: ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರಿಂದ ಅನುಮತಿ

Kannada Nadu
ವಾಲ್ಮೀಕಿ ಹಗರಣ: ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರಿಂದ ಅನುಮತಿ

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರರವರೆಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ವಾಲ್ಮೀಕಿ ಹಗರಣಕ್ಕೆ ಸಂಬAಧಿಸಿದAತೆ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಮಾಡಲು ಅನುಮತಿ ನೀಡುವಂತೆ ಇಡಿ ರಾಜ್ಯಪಾಲರಲ್ಲಿ ಮನವಿ ಮಾಡಿತ್ತು. ಇದೀಗ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಇಡಿಗೆ ಅನುಮತಿ ನೀಡಿರುವುದರಿಂದ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರಗೆ ಇಡಿ ತನಿಖೆಯ ಭೀತಿ ಎದುರಾಗಿದೆ.

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅಂದು ಸಚಿವರಾಗಿದ್ದ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿತ್ತು. ಹೀಗಾಗಿ ಬಿ.ನಾಗೇಂದ್ರ ಅವರು 2024ರ ಜೂನ್ 6ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು.

ನಂತರ ನಾಗೇಂದ್ರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿ ಮತ್ತೆ ಸಚಿವರಾಗಲು ಕಸರತ್ತು ನಡೆಸಿದ್ದರು. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಾಗೇಂದ್ರ ಅವರನ್ನು ಶೀಘ್ರವೇ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಹೀಗಾಗಿ ಬಿ.ನಾಗೇಂದ್ರ ಸಹ ಮತ್ತೆ ಸಚಿವರಾಗಲು ಉತ್ಸುಕರಾಗಿದ್ದರು. ಇದರ ಮಧ್ಯೆ ರಾಜ್ಯಪಾಲರು ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ನಾಗೇಂದ್ರ ಅವರಿಗೆ ಇಡಿಯ ತನಿಖಾ ಉರುಳು ಮತ್ತೆ ಸುತ್ತಿಕೊಂಡಾತಾಗಿದೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";