ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ವಿನಯ್ ಕುಲಕರ್ಣಿ ನೇಮಕ

ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಶಾಸಕ ವಿನಯ್ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದ್ದು, ಇಂದು ಸಭಾದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ಸಮಾಜದ ಸರ್ವಾಂಗೀಣ ಅಭ್ಯುದಯಕ್ಕಾಗಿ ಸಭಾದ ಎಲ್ಲ ಪದಾಧಿಕಾರಿಗಳೂ ಸಂಘಟಿತರಾಗಿ ಶ್ರಮಿಸಬೇಕು. ಸಂಘಟನಾ ಚತುರರು, ಸಮಾಜದ ಬಗ್ಗೆ ಅಪಾರ ಕಾಳಜಿ ಹೊಂದಿರುವ ವಿನಯ್ ಕುಲಕರ್ಣಿ ಅವರು ಈಗ ಸಭಾದ ಪದಾಧಿಕಾರಿಯಾಗಿದ್ದು ಹೆಚ್ಚಿನ ಬಲ ಬಂದಂತಾಗಿದೆ ಎಂದರು.

ಇಂದು ಸಮಾಜ ಕವಲು ದಾರಿಯಲ್ಲಿದೆ. ಏಕತೆ ಇದ್ದರೆ ಶಕ್ತಿ ಇರುತ್ತದೆ. ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳೂ ಒಗ್ಗೂಡಲು ಇದು ಸಕಾಲ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಸಭಾದ ರೇಣುಕಾಪ್ರಸನ್ನ, ಸಚ್ಚಿದಾನಂದಮೂರ್ತಿ, ಶರಣು ಮೋದಿ, ಪ್ರಭಾಕರ್ ಗೌಡ ಮತ್ತಿತರ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.

Facebook
Twitter
LinkedIn
WhatsApp
Telegram
Email
Tumblr

Leave a Comment

Your email address will not be published. Required fields are marked *

Translate »
Scroll to Top